8:04 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪ್ರಕೃತಿಯ ನಡುವೆ ತೇಜಸ್ವಿ ಓದಿನ ಗಾಜಿನ ಮನೆ: ಇಂದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಜನ್ಮದಿನ

07/09/2023, 23:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕಣ್ಣು ಹಾಯಿಸಿದಷ್ಟು ದೂರವೂ ಹಬ್ಬಿರುವ ಪ್ರಕೃತಿ, ಹಕ್ಕಿಗಳ ಕಲರವ, ಸುತ್ತ ಹೂ ಗಿಡ ಬಳ್ಳಿಗಳ ಮನಮೋಹಕ ದೃಶ್ಯ, ಈ ಅಪೂರ್ವ ದೃಶ್ಯಗಳನ್ನು ನೋಡುತ್ತಾ ಗಾಜಿನ ಮನೆಯಲ್ಲಿ ಕುಳಿತು ಪುಸ್ತಕ ಓದುವ ಅನುಭವ ಅವರ್ಣನೀಯ. ಅಂತಹ ಅನುಭವಕ್ಕೆ ಸಜ್ಜಾಗಿ ಓದುಗರಿಗೆ ಮುಕ್ತವಾಗಿದೆ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಓದಿನ ಗಾಜಿನ ಮನೆ.


ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನವೂ ಪ್ರತಿಷ್ಠಾನಕ್ಕೆ ಬರುವ ತೇಜಸ್ವಿ ಅವರ ಓದುಗರಿಗಾಗಿ ಪ್ರಶಾಂತವಾದ ಪರಿಸರದಲ್ಲಿ ಕೆಲಕಾಲ ಕುಳಿತು ಓದುವುದಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಓದಿನ ಗಾಜಿನ ಕೊಠಡಿಯನ್ನು ನಿರ್ಮಾಣ ಮಾಡಿದ್ದು ತೇಜಸ್ವಿ ಅವರ ಎಲ್ಲಾ ಪುಸ್ತಕಗಳನ್ನು ಇಲ್ಲಿ ಓದಬಹುದಾಗಿದೆ. ಯಾವ ಗಲಾಟೆ ಗದ್ದಲಗಳೂ ಇಲ್ಲದೇ ಸುತ್ತ ಗಾಜಿನ ಗೋಡೆಗಳಾಚೆ ಕಾಣುವ ಹಸಿರು ಸೌಂದರ್ಯವನ್ನು ಆಸ್ವಾದಿಸುತ್ತಾ ಹಕ್ಕಿಗಳ ಚಿಲಿಪಿಲಿಗಳನ್ನು ಕೇಳುತ್ತಾ ತೇಜಸ್ವಿ ಅವರ ಕೃತಿಗಳನ್ನು ಓದಬಹುದಾಗಿದೆ. ಪುಸ್ತಕ ಓದಿನ ಜೊತೆಗೆ ಹಬೆಯಾಡುವ ಬಿಸಿಯಾದ ಕಾಫಿಯೂ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು