4:42 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್‌ವೈ

26/07/2021, 12:21

ಬೆಂಗಳೂರು(reoporterkarnataka.com)
2ನೇ ವರ್ಷದ ಬಿಜೆಪಿ ಸಾಧನಾ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ್ಲೇ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.

ಶಿಕಾರಿಪುರದಲ್ಲಿ ಸಂಘದ ಕಾರ್ಯಕರ್ತನಾಗಿ ಜೀವನ ಆರಂಭಿಸಿದೆ. ಆರ್ ಎಸ್ ಎಸ್ ಪ್ರಚಾರಕನಾಗಿ ಕಾರ್ಯ ಆರಂಭವಾಯಿತು. ಕ್ರಮೇಣ ಶಿಕಾರಿಪುರ ಪುರಸಭೆಗೆ ನಿಂತು ಗೆದ್ದಿದ್ದೇನೆ. ಮನೆಯಿಂದ ಶಿಕಾರಿಪುರ ಕಚೇರಿಗೆ ತೆರಳಬೇಕಾದಂತ ಸಂದರ್ಭದಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ನಾನು ಸತ್ತೇ ಹೋಗಿದ್ದೆ ಎನ್ನಲಾಗುತ್ತು. ಬದುಕಿದೆ. ಅಂದೇ ಜನಸೇವೆ ಮಾಡುವಂತ ನಿರ್ಧಾರ ಮಾಡಿದೆ. ನಮ್ಮ ಕುಟುಂಬಕ್ಕೂ ಇದನ್ನು ಅವತ್ತೇ ಹೇಳಿದೆ.
ಅದರಂತೆ ರೈತರಪರ, ದಲಿತರ ಪರ ಹೋರಾಟ ಮಾಡಿದೆ ಎಂದರು.

ಹೀಗೆ ಕರ್ನಾಟಕ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವಂತ ಕೆಲಸ ಮಾಡಿದ ಪರಿಣಾಮ, ಇವತ್ತು ಸಿಎಂ ಸ್ಥಾನದಲ್ಲಿ ಇದ್ದೇನೆ ಎಂದು ಹೇಳಲು ಇಚ್ಛೆ ಪಡುತ್ತೇನೆ. ಅಂದು ಅಟಲ್ ಬಿಹಾರಿ ವಾಜಪೇಯಿ ಅವರು ನೀವು ದೆಹಲಿಗೆ ಬನ್ನಿ ಎಂದರು. ಆದ್ರೇ ನಾನು ಯಾವುದೇ ಕಾರಣಕ್ಕೂ ದೆಹಲಿಗೆ ಬರೋದಿಲ್ಲ. ಕರ್ನಾಟಕದಲ್ಲಿ ಪಕ್ಷ ಕಟ್ಟಬೇಕು ಎಂಬುದಾಗಿ ಇಲ್ಲಿಯೇ ಉಳಿದೆ. ಆ ಮೂಲಕ ಕೆಲಸ ಮಾಡಿದೆ. ಆ ಸಂದರ್ಭದಲ್ಲಿ ಪಕ್ಷದ ಹಿರಿಯರು ಬಂದಾಗ 200, 300 ಜನರು ಸೇರ್ತಾ ಇರಲಿಲ್ಲ. ಈಗ ಭಗವಂತನ ದಯೆಯಿಂದ ಒಬ್ಬರು ಇಬ್ಬರಿದ್ದವರು ಇಷ್ಟು ಪ್ರಮಾಣದಲ್ಲಿ ಬೆಳೆದಿದೆ ಎಂಬುದಾಗಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಣ್ಣೀರಿಟ್ಟರು.

ಇವತ್ತು ಇಲ್ಲಿ ನಾವು ಇದ್ದೇವೆ ಅಂದ್ರೇ. ಈ ಪರಿಸ್ಥಿತಿಗೆ ಲಕ್ಷಾಂತರ ಜನ ಕಾರ್ಯಕರ್ತರೇ ಕಾರಣ. ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಿಲ್ಲ. ಆದ್ರೇ ಪ್ರಧಾನಿ ನರೇಂದ್ರ ಮೋದಿಯವರು, ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ಮಾಡಿಕೊಟ್ಟರು. ಎರಡು ವರ್ಷ ಈ ರಾಜ್ಯದ ಜನರ ಸೇವೆ ಮಾಡಿದ್ದೇನೆ ಎಂಬುದಾಗಿ ಭಾವುಕರಾಗಿ ನುಡಿದರು.

ಇಂದು ಊಟವಾದ ಬಳಿಕ, ರಾಜಭವನಕ್ಕೆ ತೆರಳಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಯಡಿಯೂರಪ್ಪ ಘೋಷಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು