7:39 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಫಿಸಿಯೋಥೆರಪಿ ಜತೆಗೆ ಯೋಗ, ವ್ಯಾಯಾಮಕ್ಕೂ ಆದ್ಯತೆ ನೀಡಿ: ಮಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್ ಕರೆ

08/09/2023, 19:15

ಮಂಗಳೂರು(reporterkarnataka.com): ಯೋಗ ಮತ್ತು ವ್ಯಾಯಾಮವು ದೈಹಿಕ ಚಿಕಿತ್ಸೆಗೆ ನಿಕಟ ಸಂಬಂಧ ಹೊಂದಿದೆ. ಫಿಸಿಯೋಥೆರಪಿ, ಯೋಗ ಮತ್ತು ವ್ಯಾಯಾಮದ ಜೊತೆಗೆ ದೇಹದ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಬಳಸಬಹುದು. ಅದಕ್ಕಾಗಿಯೇ ಫಿಸಿಯೋಥೆರಪಿ ಜತೆಗೆ ಯೋಗಕ್ಕೂ ಆದ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಸೌತ್ ಕೆನರಾ ಫಿಸಿಯೋಥೆರಪಿ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಮಂಗಳೂರು ಫಿಸಿಯೋಕಾನ್ 2023 ಅಂತಾರಾಷ್ಟ್ರೀಯ ಫಿಸಿಯೋಥೆರಪಿ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಇಂದು ವಿಶ್ವ ಫಿಸಿಯೋಥೆರಪಿ ದಿನವಾಗಿದ್ದು, ಇದರ ಅಂಗವಾಗಿ ಆಯೋಜಿಸಲಾಗಿರುವ ಈ ಸಮ್ಮೇಳನದಲ್ಲಿ “ಭೌತಚಿಕಿತ್ಸೆ(ಫಿಸಿಯೋಥೆರಪಿ)ಯ ಸಂಭಾವ್ಯತೆಯನ್ನು ಅನ್ಲಾಕ್ ಮಾಡಲು ಸಂಪರ್ಕಿಸಿ” ಎಂಬ ವಿಷಯದ ಕುರಿತು ಚರ್ಚಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಕೆಲವು ರೀತಿಯ ಅಂಗವೈಕಲ್ಯದಿಂದ ಬಳಲುತ್ತಿರುವ ಜನರಿಗೆ ಸೇವೆ ಸಲ್ಲಿಸಲು ಮತ್ತು ದೈಹಿಕವಾಗಿ ಸಬಲೀಕರಣಗೊಳಿಸಲು ಆರಿಸಿಕೊಂಡಿರುವ ಮಾರ್ಗ ಮತ್ತು ಸಮಾಜವನ್ನು ಆರೋಗ್ಯಕರವಾಗಿ ಮತ್ತು ಸದೃಢವಾಗಿಡಲು ಸಹಕಾರಿಯಾಗಲಿದೆ ಎಂದು ಶ್ಲಾಘಿಸಿದರು.
ಭೌತಚಿಕಿತ್ಸೆಯು ಕೆಲವು ರೀತಿಯ ಗಾಯ, ಅನಾರೋಗ್ಯ ಅಥವಾ ಅಂಗವೈಕಲ್ಯದಿಂದ ಪ್ರಭಾವಿತವಾಗಿರುವ ವ್ಯಕ್ತಿಗಳಲ್ಲಿ ಚಲನಶೀಲತೆ, ದೈಹಿಕ ಶಕ್ತಿ ಮತ್ತು ಕಾರ್ಯಚಟುವಟಿಕೆಯನ್ನು ಮರುಸ್ಥಾಪಿಸುವಲ್ಲಿ ಪರಿಣತಿ ಹೊಂದಿರುವ ಚಿಕಿತ್ಸೆಯ ಹಳೆಯ ರೂಪವಾಗಿದೆ. ಭೌತಚಿಕಿತ್ಸೆ ದೈಹಿಕ ಗಾಯಕ್ಕೆ ಚಿಕಿತ್ಸೆ ನೀಡುವುದಲ್ಲದೆ, ಮಾನಸಿಕ ಸವಾಲನ್ನು ಎದುರಿಸಲು ರೋಗಿಗೆ ಧೈರ್ಯವನ್ನು ನೀಡುತ್ತದೆ ಎಂದು ಹೇಳಿದರು. ಪ್ರಸ್ತುತವಾಗಿ ಭೌತಚಿಕಿತ್ಸೆಯ ಜನಪ್ರಿಯತೆ ಮತ್ತು ಸ್ವೀಕಾರವು ಹೆಚ್ಚಿದೆ. ಫಿಟ್‍ನೆಸ್ ಅನ್ನು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡುವ ಉದ್ದೇಶದಿಂದ ಪ್ರಧಾನ ಮಂತ್ರಿಗಳು ಫಿಟ್ ಇಂಡಿಯಾ ಆಂದೋಲನವನ್ನು ಪ್ರಾರಂಭಿಸಿದ್ದಾರೆ. ಇಂದಿನ ಕಾಲದಲ್ಲಿ ಪ್ಯಾರಾ ಮೆಡಿಕಲ್ ಕ್ಷೇತ್ರ ಸಾಕಷ್ಟು ಬೆಳೆಯುತ್ತಿದೆ. ಫಿಸಿಯೋಥೆರಪಿಯಲ್ಲಿ ವೃತ್ತಿಜೀವನದ ನಿರೀಕ್ಷೆಗಳು ಹೆಚ್ಚಾಗಲು ಇದು ಕಾರಣವಾಗಿದೆ ಎಂದು ತಿಳಿಸಿದರು.
ಮೂಳೆ ಚಿಕಿತ್ಸಾಲಯಗಳು, ಆಸ್ಪತ್ರೆಗಳು, ಪುನರ್ವಸತಿ ಕೇಂದ್ರಗಳು, ಫಿಟ್ನೆಸ್ ಕೇಂದ್ರಗಳು, ಕ್ರೀಡಾ ಸೌಲಭ್ಯಗಳು ಮತ್ತು ರಕ್ಷಣಾ ಸಂಸ್ಥೆಗಳಲ್ಲಿ ಅರ್ಹ ಭೌತಚಿಕಿತ್ಸಕರ ಬೇಡಿಕೆಯು ನಿರಂತರವಾಗಿ ಹೆಚ್ಚುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ ಖಾದರ್, ಸಚಿವರಾದ ಡಾ ಶರಣ ಪ್ರಕಾಶ್ ಪಾಟೀಲ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು