9:04 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ನೆನಪಿಸಿಕೊಂಡ ಯಡಿಯೂರಪ್ಪ !

26/07/2021, 17:51

ಬೆಂಗಳೂರು(reporterkarnataka news):

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತನ್ನ ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನೆನೆಸಿಕೊಂಡರು.

1985ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಇಡೀ ರಾಜ್ಯದಿಂದ ಕೇವಲ ಇಬ್ಬರು ಶಾಸಕರು ಆಯ್ಕೆಗೊಂಡಿದ್ದರು. ಶಿವಮೊಗ್ಗದ ಶಿಕಾರಿಪುರದಿಂದ ಬಿ.ಎಸ್. ಯಡಿಯೂರಪ್ಪ ಅವರು ಪುನರಾಯ್ಕೆಗೊಂಡಿದ್ದರೆ, ದಕ್ಷಿಣ ಕನ್ನಡದ ಬೆಳ್ತಂಗಡಿಯಿಂದ ವಸಂತ ಬಂಗೇರ ಮರು ಆಯ್ಕೆಗೊಂಡಿದ್ದರು. ಬಿಜೆಪಿಯಿಂದ ಇಡೀ ರಾಜ್ಯದಿಂದ ಇಬ್ಬರು ಶಾಸಕರು ಆಯ್ಕೆಗೊಂಡಿದ್ದನ್ನು ಯಡಿಯೂರಪ್ಪ ಅವರು ತನ್ನ ಪದತ್ಯಾಗದ ಮುನ್ನ ಮಾಡಿದ ವಿದಾಯ ಭಾಷಣದಲ್ಲಿ ನೆನಪಿಸಿಕೊಂಡರು. 

ವಿದಾಯ ಭಾಷಣದಲ್ಲಿ ತನ್ನ ಹೆಸರು ಪ್ರಸ್ತಾಪ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ವಸಂತ ಬಂಗೇರ ಅವರು, ಯಡಿಯೂರಪ್ಪ ಓರ್ವ ಹೋರಾಟಗಾರ. ಹುಟ್ಟು ಹೋರಾಟಗಾರ. ಬಿಜೆಪಿಯಿಂದ ನಾವಿಬ್ಬರೇ ಶಾಸಕರಿದ್ದೆವು. ಸದನದೊಳಗೂ ಅವರು ಹೋರಾಟ ನಡೆಸುತ್ತಿದ್ದರು. ಸದನದ ಬಾವಿಗೆ ಇಳಿದು ನಾವು ಪ್ರತಿಭಟನೆ ನಡೆಸುತ್ತಿದ್ದೆವು ಎಂದರು.
Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್‌ವೈ
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ನಾನು ಅವರನ್ನು ಭೇಟಿಯಾದದ್ದು ಬಹಳ ಕಡಿಮೆ. ನಮ್ಮೂರಿನ ದೇವಾಲಯಕ್ಕೆ ಅನುದಾನ ಕೇಳಲು ಶಾಸಕ ಹರೀಶ್ ಪೂಂಜ ಅವರ ಜತೆ ಒಂದು ಬಾರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೆ. 50 ಲಕ್ಷ ಅನುದಾನ ಮಂಜೂರು ಮಾಡಿದ್ದರು ಎಂದು ಬಂಗೇರ ನೆನಪಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು