3:40 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ನೆನಪಿಸಿಕೊಂಡ ಯಡಿಯೂರಪ್ಪ !

26/07/2021, 17:51

ಬೆಂಗಳೂರು(reporterkarnataka news):

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತನ್ನ ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನೆನೆಸಿಕೊಂಡರು.

1985ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಇಡೀ ರಾಜ್ಯದಿಂದ ಕೇವಲ ಇಬ್ಬರು ಶಾಸಕರು ಆಯ್ಕೆಗೊಂಡಿದ್ದರು. ಶಿವಮೊಗ್ಗದ ಶಿಕಾರಿಪುರದಿಂದ ಬಿ.ಎಸ್. ಯಡಿಯೂರಪ್ಪ ಅವರು ಪುನರಾಯ್ಕೆಗೊಂಡಿದ್ದರೆ, ದಕ್ಷಿಣ ಕನ್ನಡದ ಬೆಳ್ತಂಗಡಿಯಿಂದ ವಸಂತ ಬಂಗೇರ ಮರು ಆಯ್ಕೆಗೊಂಡಿದ್ದರು. ಬಿಜೆಪಿಯಿಂದ ಇಡೀ ರಾಜ್ಯದಿಂದ ಇಬ್ಬರು ಶಾಸಕರು ಆಯ್ಕೆಗೊಂಡಿದ್ದನ್ನು ಯಡಿಯೂರಪ್ಪ ಅವರು ತನ್ನ ಪದತ್ಯಾಗದ ಮುನ್ನ ಮಾಡಿದ ವಿದಾಯ ಭಾಷಣದಲ್ಲಿ ನೆನಪಿಸಿಕೊಂಡರು. 

ವಿದಾಯ ಭಾಷಣದಲ್ಲಿ ತನ್ನ ಹೆಸರು ಪ್ರಸ್ತಾಪ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ವಸಂತ ಬಂಗೇರ ಅವರು, ಯಡಿಯೂರಪ್ಪ ಓರ್ವ ಹೋರಾಟಗಾರ. ಹುಟ್ಟು ಹೋರಾಟಗಾರ. ಬಿಜೆಪಿಯಿಂದ ನಾವಿಬ್ಬರೇ ಶಾಸಕರಿದ್ದೆವು. ಸದನದೊಳಗೂ ಅವರು ಹೋರಾಟ ನಡೆಸುತ್ತಿದ್ದರು. ಸದನದ ಬಾವಿಗೆ ಇಳಿದು ನಾವು ಪ್ರತಿಭಟನೆ ನಡೆಸುತ್ತಿದ್ದೆವು ಎಂದರು.
Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್‌ವೈ
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ನಾನು ಅವರನ್ನು ಭೇಟಿಯಾದದ್ದು ಬಹಳ ಕಡಿಮೆ. ನಮ್ಮೂರಿನ ದೇವಾಲಯಕ್ಕೆ ಅನುದಾನ ಕೇಳಲು ಶಾಸಕ ಹರೀಶ್ ಪೂಂಜ ಅವರ ಜತೆ ಒಂದು ಬಾರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೆ. 50 ಲಕ್ಷ ಅನುದಾನ ಮಂಜೂರು ಮಾಡಿದ್ದರು ಎಂದು ಬಂಗೇರ ನೆನಪಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು