2:54 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ಮದ್ಯ ಸಪ್ಲೈ : ಬೆಂಗಳೂರಿನ 510 ಪಬ್, ಬಾರ್‌ಗಳ ಮೇಲೆ ಸಿಸಿಬಿ ದಾಳಿ

10/09/2023, 14:49

ಬೆಂಗಳೂರು(reporterkarnataka.com): ಬೆಂಗಳೂರಿನ ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ಸಪ್ಲೈ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದಾರೆ.
ಪೊಲೀಸ್ ದಾಳಿ ವೇಳೆ ಕೆಲವು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ತಾವು ಎಂಎಲ್‌ಎ ಸಂಬಂಧಿಕರು ಎಂದು ಹೇಳಿಕೊಂಡು ವಾಗ್ವಾದ ನಡೆಸಿದ ಘಟನೆ ಕೂಡ ನಡೆದಿದೆ.
ಶುಕ್ರವಾರ ರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನ 510ಕ್ಕೂ ಹೆಚ್ಚು ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ದಾಳಿ ನಡೆಸಿದರು. ದಾಳಿ ವೇಳೆ ಅಬಕಾರಿ ನಿಯಮ ಸೇರಿದಂತೆ ಕಾನೂನುಗಳನ್ನು ಉಲ್ಲಂಘನೆ ಮಾಡುತ್ತಿದ್ದ ಆರೋಪದ ಮೇಲೆ ಕೆಲ ಪಬ್‌ಗಳ ಮೇಲೆ ಕೇಸ್ ಜಡಿಯಲಾಗಿದೆ.
ಇತ್ತೀಚೆಗೆ ಶಾಲಾ ಮುಖ್ಯಸ್ಥರು ಪೊಲೀಸ್ ಆಯುಕ್ತರಿಗೆ ಮನವಿಯೊಂದನ್ನು ಕೊಟ್ಟಿದ್ದರು. ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ನೀಡಲಾಗುತ್ತಿದೆ. ಇದನ್ನು ಸರಿಪಡಿಸುವಂತೆ ಕೇಳಿಕೊಂಡಿದ್ದರು. ಈ ಬಗ್ಗೆ ಕಮಿಷನರ್ ಅವರಿಂದ ನಿರ್ದೇಶನ ಪಡೆದು ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿ, ತಪಾಸಣೆ ನಡೆಸಿ ನಿಯಮ ಉಲ್ಲಂಘನೆ ಆಗುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಅನಧಿಕೃತವಾಗಿ ಪಬ್‌ಗಳಲ್ಲಿ ಧೂಮಪಾನಕ್ಕೆ ಅವಕಾಶ ಕೊಡಲಾಗಿದೆ. ಪ್ರತಿ ಪಬ್‌ಗಳಲ್ಲಿ ಧೂಮಪಾನಕ್ಕೆ ಪ್ರತ್ಯೇಕ ರೂಂ ವ್ಯವಸ್ಥೆ ಇರಬೇಕು. ಇದಲ್ಲದೆ ಅಬಕಾರಿ ನಿಯಮಗಳನ್ನು ಸಹ ಉಲ್ಲಂಘನೆ ಮಾಡಿದ್ದಾರೆ. ಅಪ್ರಾಪ್ತರಿಗೆ ಮದ್ಯ ನೀಡುತ್ತಿರೋದು ಕಂಡು ಬಂದಿದ್ದು, ಜುವೆನಿಲ್ ಜಸ್ಟಿಸ್ ಆಕ್ಟ್ ಹಾಗೂ ಕೋಪ್ಟಾ ಆಕ್ಟ್ ಅಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು