12:22 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪ್ರತಿಪಕ್ಷ ನಾಯಕರ ಆಯ್ಕೆ ವಿಳಂಬ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಲೀಗಲ್ ನೋಟಿಸ್; ಪ್ರತಿ ನಳಿನ್ ಕುಮಾರ್ ಕಟೀಲಿಗೆ

10/09/2023, 22:54

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕನ ಆಯ್ಕೆಯಲ್ಲಿ ವಿಳಂಬ ನೀತಿ ಅನುಸರಿಸಿರುವುದಕ್ಕೆ
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾರಿಗೆ ವಕೀಲ ಎನ್.ಪಿ. ಅಮೃತೇಶ್ ಲೀಗಲ್ ನೋಟಿಸ್ ನೀಡಿದ್ದಾರೆ.
ರಾಜ್ಯದಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆಯಾಗದಿರುವುದರಿಂದ ಹಲವು ನೇಮಕ ವಿಳಂಬವಾಗಿವೆ. ಮಾನವ ಹಕ್ಕುಗಳ ಆಯೋಗ, ಉಪಲೋಕಾಯುಕ್ತ, ಕೆಪಿಎಸ್ ಸಿ ಸೇರಿದಂತೆ ಹಲವು ನೇಮಕಗಳಾಗುತ್ತಿಲ್ಲ. ಕಾನೂನಿನಂತೆ ಕೆಲ ಮಹತ್ವದ ಹುದ್ದೆಗಳಿಗೆ ನೇಮಕ ಮಾಡಲು ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ, ಮುಖ್ಯ ನ್ಯಾಯಮೂರ್ತಿಗಳ ಸಮಾಲೋಚನೆಯ ಅಗತ್ಯವಿದೆ ಎಂದಿದ್ದಾರೆ.
ಸರಕಾರ ಎಡವಿದಾಗ ಎಚ್ಚರಿಸಲು, ಜನರ ಪರವಾಗಿ ಸಮರ್ಥವಾಗಿ ಧ್ವನಿ ಎತ್ತಲು ಪ್ರತಿ ಪಕ್ಷದ ನಾಯಕನ ಅಗತ್ಯವಿದೆ. ಭಾರತದ ಪ್ರಜೆಯಾಗಿ, ಮತದಾರನಾಗಿ, ಪ್ರತಿಪಕ್ಷದ ನಾಯಕನನ್ನು ನೇಮಿಸುವಂತೆ ಕೋರಿಕೊಳ್ಳುವ ಹಕ್ಕು ನನಗಿದೆ. ಹೀಗಾಗಿ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ನೋಟಿಸ್​ನಲ್ಲಿ ಉಲ್ಲೇಖಿಸಿದ್ದಾರೆ. ನೋಟಿಸ್ ಪ್ರತಿಯನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸ್ಪೀಕರ್ ಹಾಗೂ ರಾಜ್ಯಪಾಲರಿಗೂ ಕಳುಹಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು