7:46 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಪ್ರತಿಪಕ್ಷ ನಾಯಕರ ಆಯ್ಕೆ ವಿಳಂಬ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಲೀಗಲ್ ನೋಟಿಸ್; ಪ್ರತಿ ನಳಿನ್ ಕುಮಾರ್ ಕಟೀಲಿಗೆ

10/09/2023, 22:54

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕನ ಆಯ್ಕೆಯಲ್ಲಿ ವಿಳಂಬ ನೀತಿ ಅನುಸರಿಸಿರುವುದಕ್ಕೆ
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾರಿಗೆ ವಕೀಲ ಎನ್.ಪಿ. ಅಮೃತೇಶ್ ಲೀಗಲ್ ನೋಟಿಸ್ ನೀಡಿದ್ದಾರೆ.
ರಾಜ್ಯದಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆಯಾಗದಿರುವುದರಿಂದ ಹಲವು ನೇಮಕ ವಿಳಂಬವಾಗಿವೆ. ಮಾನವ ಹಕ್ಕುಗಳ ಆಯೋಗ, ಉಪಲೋಕಾಯುಕ್ತ, ಕೆಪಿಎಸ್ ಸಿ ಸೇರಿದಂತೆ ಹಲವು ನೇಮಕಗಳಾಗುತ್ತಿಲ್ಲ. ಕಾನೂನಿನಂತೆ ಕೆಲ ಮಹತ್ವದ ಹುದ್ದೆಗಳಿಗೆ ನೇಮಕ ಮಾಡಲು ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ, ಮುಖ್ಯ ನ್ಯಾಯಮೂರ್ತಿಗಳ ಸಮಾಲೋಚನೆಯ ಅಗತ್ಯವಿದೆ ಎಂದಿದ್ದಾರೆ.
ಸರಕಾರ ಎಡವಿದಾಗ ಎಚ್ಚರಿಸಲು, ಜನರ ಪರವಾಗಿ ಸಮರ್ಥವಾಗಿ ಧ್ವನಿ ಎತ್ತಲು ಪ್ರತಿ ಪಕ್ಷದ ನಾಯಕನ ಅಗತ್ಯವಿದೆ. ಭಾರತದ ಪ್ರಜೆಯಾಗಿ, ಮತದಾರನಾಗಿ, ಪ್ರತಿಪಕ್ಷದ ನಾಯಕನನ್ನು ನೇಮಿಸುವಂತೆ ಕೋರಿಕೊಳ್ಳುವ ಹಕ್ಕು ನನಗಿದೆ. ಹೀಗಾಗಿ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ನೋಟಿಸ್​ನಲ್ಲಿ ಉಲ್ಲೇಖಿಸಿದ್ದಾರೆ. ನೋಟಿಸ್ ಪ್ರತಿಯನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸ್ಪೀಕರ್ ಹಾಗೂ ರಾಜ್ಯಪಾಲರಿಗೂ ಕಳುಹಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು