2:41 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಪ್ರತಿಪಕ್ಷ ನಾಯಕರ ಆಯ್ಕೆ ವಿಳಂಬ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಲೀಗಲ್ ನೋಟಿಸ್; ಪ್ರತಿ ನಳಿನ್ ಕುಮಾರ್ ಕಟೀಲಿಗೆ

10/09/2023, 22:54

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕನ ಆಯ್ಕೆಯಲ್ಲಿ ವಿಳಂಬ ನೀತಿ ಅನುಸರಿಸಿರುವುದಕ್ಕೆ
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾರಿಗೆ ವಕೀಲ ಎನ್.ಪಿ. ಅಮೃತೇಶ್ ಲೀಗಲ್ ನೋಟಿಸ್ ನೀಡಿದ್ದಾರೆ.
ರಾಜ್ಯದಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆಯಾಗದಿರುವುದರಿಂದ ಹಲವು ನೇಮಕ ವಿಳಂಬವಾಗಿವೆ. ಮಾನವ ಹಕ್ಕುಗಳ ಆಯೋಗ, ಉಪಲೋಕಾಯುಕ್ತ, ಕೆಪಿಎಸ್ ಸಿ ಸೇರಿದಂತೆ ಹಲವು ನೇಮಕಗಳಾಗುತ್ತಿಲ್ಲ. ಕಾನೂನಿನಂತೆ ಕೆಲ ಮಹತ್ವದ ಹುದ್ದೆಗಳಿಗೆ ನೇಮಕ ಮಾಡಲು ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ, ಮುಖ್ಯ ನ್ಯಾಯಮೂರ್ತಿಗಳ ಸಮಾಲೋಚನೆಯ ಅಗತ್ಯವಿದೆ ಎಂದಿದ್ದಾರೆ.
ಸರಕಾರ ಎಡವಿದಾಗ ಎಚ್ಚರಿಸಲು, ಜನರ ಪರವಾಗಿ ಸಮರ್ಥವಾಗಿ ಧ್ವನಿ ಎತ್ತಲು ಪ್ರತಿ ಪಕ್ಷದ ನಾಯಕನ ಅಗತ್ಯವಿದೆ. ಭಾರತದ ಪ್ರಜೆಯಾಗಿ, ಮತದಾರನಾಗಿ, ಪ್ರತಿಪಕ್ಷದ ನಾಯಕನನ್ನು ನೇಮಿಸುವಂತೆ ಕೋರಿಕೊಳ್ಳುವ ಹಕ್ಕು ನನಗಿದೆ. ಹೀಗಾಗಿ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ನೋಟಿಸ್​ನಲ್ಲಿ ಉಲ್ಲೇಖಿಸಿದ್ದಾರೆ. ನೋಟಿಸ್ ಪ್ರತಿಯನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸ್ಪೀಕರ್ ಹಾಗೂ ರಾಜ್ಯಪಾಲರಿಗೂ ಕಳುಹಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು