9:57 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ತಿರುವೈಲು ದ.ಕ. ಜಿಪಂ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3 ನೂತನ ತರಗತಿ ಕೊಠಡಿ ಉದ್ಘಾಟನೆ

11/09/2023, 12:48

ಗುರುಪುರ(reporterkarnataka.com): ಕಳೆದ 6 ವರ್ಷಗಳ ಅವಧಿಯಲ್ಲಿ ಶಾಸಕನಾಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಿಸುತ್ತಿದ್ದೇನೆ. ತಿರುವೈಲು ಶಾಲೆಗೆ ಸರ್ಕಾರದ `ವಿವೇಕ’ ಯೋಜನೆಯಡಿ ಎರಡು ತರಗತಿ ಕೊಠಡಿ ಒದಗಿಸಿ ಕೊಟ್ಟಿದ್ದೇನೆ. ಇಲ್ಲಿ ವಿದ್ಯಾರ್ಥಿಗಳ ಕೊರತೆ ಇಲ್ಲ. ಶಾಲೆಯು ಹೈಸ್ಕೂಲ್ ಆಗಿ ಮಾರ್ಪಾಡಾಗಬೇಕು ಎನ್ನುವ ಸ್ಥಳೀಯರ ಬೇಡಿಕೆ ಪೂರೈಸಲು ಪ್ರಯತ್ನಿಸುತ್ತೇನೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು.


ವಾಮಂಜೂರು ಮನಪಾ ತಿರುವೈಲು 20ನೇ ವಾರ್ಡ್ನ ದ.ಕ.ಜಿ.ಪಂ. ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ಮೂರು ನೂತನ ತರಗತಿ ಕೊಠಡಿ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸಿದ ಹೇಮಲತಾ ಸಾಲ್ಯಾನ್ ಮತ್ತು ಅವರ ಪತಿ, ಉದ್ಯಮಿ ರಘು ಸಾಲ್ಯಾನ್ ಅವರನ್ನು ಶಾಲೆಯ ಪರವಾಗಿ ಶಾಸಕರು ಶಾಲು ಹೊದಿಸಿ, ಹೂಗುಚ್ಛ ನೀಡಿ ಸನ್ಮಾನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು