3:48 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹಾಸನದಲ್ಲಿ ಗೌಡ್ರ ಕುಟುಂಬ ಗೆಲ್ಲಿಸಲು ಬಿಜೆಪಿಗನಾದ ನಾನ್ಯಾಕೆ ಜೆಡಿಎಸ್ ಪರ ಕೆಲಸ ಮಾಡಬೇಕು: ಮಾಜಿ ಶಾಸಕ ಪ್ರೀತಂಗೌಡ ಪ್ರಶ್ನೆ

14/09/2023, 15:29

ಹಾಸನ(reporterkarnataka.com): ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದವರು ಅಭ್ಯರ್ಥಿಯಾಗುತ್ತಾರೆ. ನಿಷ್ಠಾವಂತ ಬಿಜೆಪಿ ಕಾರ್ಯಕರ್ತನಾಗಿ ಜೆಡಿಎಸ್ ಉಳಿಸಲು ನಾನ್ಯಾಕೆ ಕೆಲಸ ಮಾಡಬೇಕು ಎಂದು ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಪ್ರಶ್ನಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರೀತಂಗೌಡ ತನ್ನ ಅಸಮಾಧಾನ ಹೊರ ಹಾಕಿದ್ದಾರೆ.
ನಾನು ಬಿಜೆಪಿಯ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಜೆಡಿಎಸ್ ಪಕ್ಷ ಉಳಿಸೋದಕ್ಕೆ ನಾವ್ಯಾಕೆ ಸಹಕಾರ ಮಾಡಬೇಕು. ಯಾವುದೇ ಕಾರಣಕ್ಕೂ ನಮ್ಮಿಂದ ಅದು ಸಾಧ್ಯವಿಲ್ಲ ಎಂದು ಕಡ್ಡಿ ತುಂಡು ಮಾಡುವ ತರಹ ಮಾಧ್ಯಮದ ಮುಂದೆ ಪ್ರೀತಂಗೌಡ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ. ಸುರೇಶ್ ಸೋಲಿಸಲು ಯೋಗೇಶ್ವರ್ ಹೊಂದಾಣಿಕೆ ಬಗ್ಗೆಯೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ನಾವು ಕುಟುಂಬ ರಾಜಕಾರಣ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಿಲ್ಲಲಿ, ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕು ಅಂತ ಬಂದರೆ ಸ್ವಾಗತವಿದೆ. ಬಿಜೆಪಿ ಪಕ್ಷ ಉಳಿಸಿಕೊಳ್ಳಲು ನಮಗೆ ಗೊತ್ತಿದೆ. ನಾವು ಕುಟುಂಬ ರಾಜಕಾರಣ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು