6:25 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಕದ್ರಿ ಯೋಧ ಸ್ಮಾರಕ ಅಭಿವೃದ್ಧಿಗೆ 25 ಲಕ್ಷ ರೂ. ಅನುದಾನ: ಶಾಸಕ ವೇದವ್ಯಾಸ ಕಾಮತ್

26/07/2021, 19:18

ಮಂಗಳೂರು(reporterkarnataka news): ಕಾರ್ಗಿಲ್ ಗೆಲುವಿಗೆ 22 ವರ್ಷ ಸಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಕದ್ರಿ ಯೋಧ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು,

ಕಾರ್ಗಿಲ್ ಯುದ್ಧದಲ್ಲಿ ಅನೇಕ ಯೋಧರು ಬಲಿದಾನ ಮಾಡಿದ್ದಾರೆ. ಅವರೆಲ್ಲರನ್ನೂ ರಾಜಕೀಯ ರಹಿತವಾಗಿ ಗೌರವಿಸುವ ಕೆಲಸವಾಗಬೇಕು. ಮಾತೃಭೂಮಿಯ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಯೋಧರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. 

ಭಾರತ ಎಂದೆಂದಿಗೂ ಶಾಂತಿಯನ್ನು ಬಯಸುವ ರಾಷ್ಟ್ರ. ಆದರೆ ಅದನ್ನು ಅಸಹಾಯತೆ ಎಂದು ಭಾವಿಸಿದರೆ ಕಾರ್ಗಿಲ್ ಕದನ, ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ಮೇಲಿನ ದಾಳಿಯ ಮೂಲಕ ಸೇನಾ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಕೊಡುವಲ್ಲಿ ಭಾರತೀಯ ಸೇನೆ ಸಮರ್ಥವಾಗಿದೆ ಎಂದರು. ಕದ್ರಿಯ ಯೋಧ ಸ್ಮಾರಕದ ಅಭಿವೃದ್ಧಿಗೆ 25 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗುವುದು. ಮೇಲ್ಛಾವಣಿ, ಬೆಳಕಿನ ವ್ಯವಸ್ಥೆ, ಸೌಂಡ್ ಸಿಸ್ಟಮ್, ಕಾರಂಜಿಗಳ ಅಭಿವೃದ್ಧಿ ಸೇರಿದಂತೆ ಯೋಧ ಸ್ಮಾರಕದ ಸಮಗ್ರ ಅಭಿವೃದ್ಧಿಗೆ ಅನುದಾನ ವಿನಿಯೋಗಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶಕಿಲಾ ಕಾವಾ, ಬಿಜೆಪಿ ಮುಖಂಡರಾದ ರೂಪಾ.ಡಿ ಬಂಗೇರ, ಪೂಜಾ ಪೈ, ಪ್ರಶಾಂತ್ ಪೈ, ಸೈನಿಕರ ಸಂಘದ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಬಾಳ, ಕಾರ್ಯದರ್ಶಿ ಕ್ಯಾಪ್ಟನ್ ದೀಪಕ್ ಅಡ್ಯಂತಾಯ,ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಕ್ರಮ್ ದತ್ತ, ಹಿರಿಯ ಅಧಿಕಾರಿಗಳಾದ  ಬ್ರಿಗೇಡಿಯರ್ ಐ.ಎನ್ ರೈ, ಕರ್ನಲ್ ಎನ್.ಶರತ್ ಭಂಡಾರಿ, ಕರ್ನಲ್ ಜಯಚಂದ್ರನ್, ರೋಟರಿ ಪ್ರಮುಖರಾದ ಜೆ.ಪಿ ರೈ, ಲಯನ್ಸ್ ಪ್ರಮುಖರಾದ ವಿಜಯ ವಿಷ್ಣು ಮಯ್ಯ, ರೋಟರಿ ಸಂಸ್ಥೆಯ ಪ್ರಮುಖರು, ಲಯನ್ಸ್ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು