3:59 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕದ್ರಿ ಯೋಧ ಸ್ಮಾರಕ ಅಭಿವೃದ್ಧಿಗೆ 25 ಲಕ್ಷ ರೂ. ಅನುದಾನ: ಶಾಸಕ ವೇದವ್ಯಾಸ ಕಾಮತ್

26/07/2021, 19:18

ಮಂಗಳೂರು(reporterkarnataka news): ಕಾರ್ಗಿಲ್ ಗೆಲುವಿಗೆ 22 ವರ್ಷ ಸಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಕದ್ರಿ ಯೋಧ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು,

ಕಾರ್ಗಿಲ್ ಯುದ್ಧದಲ್ಲಿ ಅನೇಕ ಯೋಧರು ಬಲಿದಾನ ಮಾಡಿದ್ದಾರೆ. ಅವರೆಲ್ಲರನ್ನೂ ರಾಜಕೀಯ ರಹಿತವಾಗಿ ಗೌರವಿಸುವ ಕೆಲಸವಾಗಬೇಕು. ಮಾತೃಭೂಮಿಯ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಯೋಧರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. 

ಭಾರತ ಎಂದೆಂದಿಗೂ ಶಾಂತಿಯನ್ನು ಬಯಸುವ ರಾಷ್ಟ್ರ. ಆದರೆ ಅದನ್ನು ಅಸಹಾಯತೆ ಎಂದು ಭಾವಿಸಿದರೆ ಕಾರ್ಗಿಲ್ ಕದನ, ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ಮೇಲಿನ ದಾಳಿಯ ಮೂಲಕ ಸೇನಾ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಕೊಡುವಲ್ಲಿ ಭಾರತೀಯ ಸೇನೆ ಸಮರ್ಥವಾಗಿದೆ ಎಂದರು. ಕದ್ರಿಯ ಯೋಧ ಸ್ಮಾರಕದ ಅಭಿವೃದ್ಧಿಗೆ 25 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗುವುದು. ಮೇಲ್ಛಾವಣಿ, ಬೆಳಕಿನ ವ್ಯವಸ್ಥೆ, ಸೌಂಡ್ ಸಿಸ್ಟಮ್, ಕಾರಂಜಿಗಳ ಅಭಿವೃದ್ಧಿ ಸೇರಿದಂತೆ ಯೋಧ ಸ್ಮಾರಕದ ಸಮಗ್ರ ಅಭಿವೃದ್ಧಿಗೆ ಅನುದಾನ ವಿನಿಯೋಗಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶಕಿಲಾ ಕಾವಾ, ಬಿಜೆಪಿ ಮುಖಂಡರಾದ ರೂಪಾ.ಡಿ ಬಂಗೇರ, ಪೂಜಾ ಪೈ, ಪ್ರಶಾಂತ್ ಪೈ, ಸೈನಿಕರ ಸಂಘದ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಬಾಳ, ಕಾರ್ಯದರ್ಶಿ ಕ್ಯಾಪ್ಟನ್ ದೀಪಕ್ ಅಡ್ಯಂತಾಯ,ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಕ್ರಮ್ ದತ್ತ, ಹಿರಿಯ ಅಧಿಕಾರಿಗಳಾದ  ಬ್ರಿಗೇಡಿಯರ್ ಐ.ಎನ್ ರೈ, ಕರ್ನಲ್ ಎನ್.ಶರತ್ ಭಂಡಾರಿ, ಕರ್ನಲ್ ಜಯಚಂದ್ರನ್, ರೋಟರಿ ಪ್ರಮುಖರಾದ ಜೆ.ಪಿ ರೈ, ಲಯನ್ಸ್ ಪ್ರಮುಖರಾದ ವಿಜಯ ವಿಷ್ಣು ಮಯ್ಯ, ರೋಟರಿ ಸಂಸ್ಥೆಯ ಪ್ರಮುಖರು, ಲಯನ್ಸ್ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು