4:23 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಅಕ್ರಮ ಮದ್ಯ ನುಸುಳುವಿಕೆ: ಗಡಿಗಳಲ್ಲಿ ತೀವ್ರ ನಿಗಾ ವಹಿಸಲು ಅಬಕಾರಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

14/09/2023, 22:08

ಬೆಂಗಳೂರು(reporterkarnataka.com): ರಾಜ್ಯದಲ್ಲಿ ತೆರಿಗೆ ಸೋರಿಕೆಯನ್ನು ತಡೆದು ಆದಾಯವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಗಡಿ ಭಾಗಗಳ ಚೆಕ್‌ಪೋಸ್ಟಿನಲ್ಲಿ ಹೋಂ ಗಾರ್ಡ್‌ಗಳ ಸೇವೆ ಪಡೆದುಕೊಂಡು, ತಪಾಸಣೆಯನ್ನು ಇನ್ನಷ್ಟು ಬಲ ಪಡಿಸಲು ಹಾಗೂ ಇತರ ಸೌಲಭ್ಯಕ್ಕಾಗಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.
ಎಲ್ಲ ಕಡೆ ಜಾಗೃತದಳ ಕಟ್ಟೆಚ್ಚರ ವಹಿಸಬೇಕು. ಎಲ್ಲ ಉಪ ಆಯುಕ್ತರು ರಾಜಸ್ವ ಸಂಗ್ರಹ ಹೆಚ್ಚಳಕ್ಕೆ ಆದ್ಯತೆ ನೀಡಬೇಕು. ಹಾಗೆ ಹಳೆ ಬಾಕಿ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದರು.
ಕಳ್ಳಭಟ್ಟಿಗೆ ಕಡಿವಾಣ ಹಾಕಿ, ಅಕ್ರಮ ಮದ್ಯ ನುಸುಳುವಿಕೆ ತಪ್ಪಿಸಿ, ಬಾಕಿ ತೆರಿಗೆ ವಸೂಲಿ ಮಾಡಿ ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿ ಸಾಧಿಸಿ ಎಂದು ಮುಖ್ಯಮಂತ್ರಿ ತಿಳಿಸಿದರು.
ಇಲಾಖೆಯ ಪ್ರಸಕ್ತ ವರ್ಷದ ರಾಜಸ್ವ ಸಂಗ್ರಹ ಗುರಿ 36,000 ಕೋಟಿ ಇದ್ದು, ತೆರಿಗೆ ಸಂಗ್ರಹದ ಬೆಳವಣಿಗೆ ದರ 5.31% ರಷ್ಟಿದೆ. ನಿಗದಿತ ಗುರಿ ಸಾಧನೆಗೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ರಾಜ್ಯದ ಗಡಿ ಭಾಗಗಳಲ್ಲಿ, ವಿಶೇಷವಾಗಿ ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಣಿಕೆ ಕುರಿತು ಜಾರಿ ದಳದವರು ಹೆಚ್ಚಿನ ನಿಗಾ ವಹಿಸಬೇಕು. ಕಳ್ಳಭಟ್ಟಿ ಮದ್ಯ ತಯಾರಿಕೆ, ಮಾರಾಟದಿಂದ ಬಡವರ ಆದಾಯ ಮತ್ತು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದರಿಂದ ಕಳ್ಳಭಟ್ಟಿ ಮದ್ಯ ತಯಾರಿಕೆ ಮತ್ತು ಮಾರಾಟವನ್ನು ಮಟ್ಟಹಾಕುವಂತೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಸೂಚಿಸಿದರು.
ಅಬಕಾರಿ ಇಲಾಖೆಯಲ್ಲಿ ಸುಧಾರಣಾ ಕ್ರಮಗಳ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು.
ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್‌ ಹಾಗೂ ಡಾ. ಎಂ.ಟಿ. ರೇಜು, ಅಬಕಾರಿ ಆಯುಕ್ತ ರವಿಶಂಕರ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಮತ್ತು ನಸೀರ್‌ ಅಹ್ಮದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು