9:01 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಅಕ್ಟೋಬರ್ 22: ಫಾದರ್ ಮ್ಯಾಥ್ಯು ವಾಸ್ ಮೆಮೊರಿಯಲ್ ಇಂಟರ್ ಪ್ಯಾರಿಶ್ ಟೂರ್ನಮೆಂಟ್

14/09/2023, 22:27

ಮಂಗಳೂರು(reporterkarnataka.com): ಸಮಾಜ ಮತ್ತು ಕಥೊಲಿಕ್ ಸಭೆಗಾಗಿ ನಿಸ್ವಾರ್ಥ ಸೇವೆ ನೀಡಿದ ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟಿನ ಸ್ಥಾಪಕ ಟ್ರಸ್ಟಿ, ಫಾದರ್ ಮ್ಯಾಥ್ಯು ವಾಸ್ ಅವರ ಸ್ಮರಣಾರ್ಥವಾಗಿ ಮಂಗಳೂರಿನ
ಕಮ್ಯುನಿಟಿ ಎಂಪವರ್‌ಮೆಂಟ್ ಟ್ರಸ್ಟ್ , ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಶಿಯೇಶನ್ ಮಂಗಳೂರು, ಕಥೊಲಿಕ್ ಸಭಾ ಮಂಗಳೂರು ಪ್ರದೇಶ ಮತ್ತು ಕಥೊಲಿಕ್ ಸಭಾ, ಉಡುಪಿ ಪ್ರದೇಶ ಇವರ ಸಹಯೋಗದಲ್ಲಿ ಇಂಟರ್ ಪ್ಯಾರಿಶ್ ಫುಟ್‌ಬಾಲ್ (ಪುರುಷರಿಗೆ) ಮತ್ತು ತ್ರೋಬಾಲ್ (ಮಹಿಳೆಯರಿಗೆ) ಟೂರ್ನಮೆಂಟ್ ಅಕ್ಟೋಬರ್ 22ರಂದು ಸಂತ ಅಲೋಶಿಯಸ್ ಪಿಯು ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಫಾದರ್ ಮ್ಯಾಥ್ಯು ವಾಸ್ ಮೆಮೊರಿಯಲ್ ಇಂಟರ್ ಪ್ಯಾರಿಶ್ ಟೂರ್ನಮೆಂಟ್ ಸಂಚಾಲಕ ಅನಿಲ್ ಲೋಬೊ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪದಕಗಳನ್ನು ಗೆದ್ದ ಕಥೊಲಿಕ್ ಸಮುದಾಯದ ಕ್ರೀಡಾಳುಗಳನ್ನು ಸನ್ಮಾನಿಸಲು ಯೋಜಿಸಲಾಗಿದೆ. 1.10.2022 ರಿಂದ 30.9.2023ರವರೆಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪದಕಗಳನ್ನು ಗೆದ್ದ ಕ್ರೀಡಾಳುಗಳ ಹೆಸರನ್ನು ಅಕ್ಟೋಬರ್ 15, 2023 ರೊಳಗೆ ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟ್, ಮಿಲಾಗ್ರಿಸ್, ಮಂಗಳೂರು ಇಲ್ಲಿಗೆ ತಲುಪಿಸಬಹುದು ಅಥವಾ ದೂರವಾಣಿ/ವಾಟ್ಸ್ಆ್ಯಪ್ ಸಂಖ್ಯೆ :
9448379689, 9844502279 ಮೂಲಕವೂ ತಿಳಿಸಬಹುದಾಗಿದೆ.
ಟೂರ್ನಮೆಂಟಿನ ವಿವರ ಮತ್ತು ನಿಬಂಧನೆಗಳನ್ನು ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ಚರ್ಚ್ ಗಳಿಗೆ ಕಳುಹಿಸಲಾಗಿದೆ. ಟೂರ್ನಮೆಂಟನಲ್ಲಿ ಭಾಗವಹಿಸುವ ಪಂಗಡಗಳು 15.10.2023ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಕೋರಲಾಗಿದೆ.
ಪ್ರತಿ ವಿಜೇತ ಪಂಗಡಗಳಿಗೆ ರೂ. 25000 (ಪ್ರಥಮ), ರೂ. 15000 (ದ್ವಿತೀಯ), ರೂ. 7500 (ತೃತೀಯ) ಬಹುಮಾನಗಳಿದ್ದು ಪ್ರಶಸ್ತಿ ಫಲಕವನ್ನು ನೀಡಲಾಗುವುದು.
ಪತ್ರಿಕಾಗೋಷ್ಠಿಯಲ್ಲಿ
ಸೆಲೆಸ್ಟಿನ್ ಡಿಸೋಜ (ಮ್ಯಾನೇಜಿಂಗ್ ಟ್ರಸ್ಟಿ, ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟ್, ಮಂಗಳೂರು),
ಆಲ್ವಿನ್ ಡಿಸೋಜ( ಅಧ್ಯಕ್ಷರು, ಕ್ಯಾಥೊಲಿಕ್ ಸಭಾ, ಮಂಗಳೂರು ಪ್ರದೇಶ),
ಸಂತೋಷ್ ಕರ್ನೆಲಿಯೊ (ಅಧ್ಯಕ್ಷರು, ಕ್ಯಾಥೊಲಿಕ್ ಸಭಾ, ಉಡುಪಿ ಪ್ರದೇಶ),
ಮೆಲ್ವಿನ್ ಪೆರಿಸ್ (ಕೋಶಾಧಿಕಾರಿ, ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಶನ್, ಮಂಗಳೂರು) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು