6:09 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಅಕ್ಟೋಬರ್ 22: ಫಾದರ್ ಮ್ಯಾಥ್ಯು ವಾಸ್ ಮೆಮೊರಿಯಲ್ ಇಂಟರ್ ಪ್ಯಾರಿಶ್ ಟೂರ್ನಮೆಂಟ್

14/09/2023, 22:27

ಮಂಗಳೂರು(reporterkarnataka.com): ಸಮಾಜ ಮತ್ತು ಕಥೊಲಿಕ್ ಸಭೆಗಾಗಿ ನಿಸ್ವಾರ್ಥ ಸೇವೆ ನೀಡಿದ ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟಿನ ಸ್ಥಾಪಕ ಟ್ರಸ್ಟಿ, ಫಾದರ್ ಮ್ಯಾಥ್ಯು ವಾಸ್ ಅವರ ಸ್ಮರಣಾರ್ಥವಾಗಿ ಮಂಗಳೂರಿನ
ಕಮ್ಯುನಿಟಿ ಎಂಪವರ್‌ಮೆಂಟ್ ಟ್ರಸ್ಟ್ , ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಶಿಯೇಶನ್ ಮಂಗಳೂರು, ಕಥೊಲಿಕ್ ಸಭಾ ಮಂಗಳೂರು ಪ್ರದೇಶ ಮತ್ತು ಕಥೊಲಿಕ್ ಸಭಾ, ಉಡುಪಿ ಪ್ರದೇಶ ಇವರ ಸಹಯೋಗದಲ್ಲಿ ಇಂಟರ್ ಪ್ಯಾರಿಶ್ ಫುಟ್‌ಬಾಲ್ (ಪುರುಷರಿಗೆ) ಮತ್ತು ತ್ರೋಬಾಲ್ (ಮಹಿಳೆಯರಿಗೆ) ಟೂರ್ನಮೆಂಟ್ ಅಕ್ಟೋಬರ್ 22ರಂದು ಸಂತ ಅಲೋಶಿಯಸ್ ಪಿಯು ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಫಾದರ್ ಮ್ಯಾಥ್ಯು ವಾಸ್ ಮೆಮೊರಿಯಲ್ ಇಂಟರ್ ಪ್ಯಾರಿಶ್ ಟೂರ್ನಮೆಂಟ್ ಸಂಚಾಲಕ ಅನಿಲ್ ಲೋಬೊ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪದಕಗಳನ್ನು ಗೆದ್ದ ಕಥೊಲಿಕ್ ಸಮುದಾಯದ ಕ್ರೀಡಾಳುಗಳನ್ನು ಸನ್ಮಾನಿಸಲು ಯೋಜಿಸಲಾಗಿದೆ. 1.10.2022 ರಿಂದ 30.9.2023ರವರೆಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪದಕಗಳನ್ನು ಗೆದ್ದ ಕ್ರೀಡಾಳುಗಳ ಹೆಸರನ್ನು ಅಕ್ಟೋಬರ್ 15, 2023 ರೊಳಗೆ ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟ್, ಮಿಲಾಗ್ರಿಸ್, ಮಂಗಳೂರು ಇಲ್ಲಿಗೆ ತಲುಪಿಸಬಹುದು ಅಥವಾ ದೂರವಾಣಿ/ವಾಟ್ಸ್ಆ್ಯಪ್ ಸಂಖ್ಯೆ :
9448379689, 9844502279 ಮೂಲಕವೂ ತಿಳಿಸಬಹುದಾಗಿದೆ.
ಟೂರ್ನಮೆಂಟಿನ ವಿವರ ಮತ್ತು ನಿಬಂಧನೆಗಳನ್ನು ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ಚರ್ಚ್ ಗಳಿಗೆ ಕಳುಹಿಸಲಾಗಿದೆ. ಟೂರ್ನಮೆಂಟನಲ್ಲಿ ಭಾಗವಹಿಸುವ ಪಂಗಡಗಳು 15.10.2023ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಕೋರಲಾಗಿದೆ.
ಪ್ರತಿ ವಿಜೇತ ಪಂಗಡಗಳಿಗೆ ರೂ. 25000 (ಪ್ರಥಮ), ರೂ. 15000 (ದ್ವಿತೀಯ), ರೂ. 7500 (ತೃತೀಯ) ಬಹುಮಾನಗಳಿದ್ದು ಪ್ರಶಸ್ತಿ ಫಲಕವನ್ನು ನೀಡಲಾಗುವುದು.
ಪತ್ರಿಕಾಗೋಷ್ಠಿಯಲ್ಲಿ
ಸೆಲೆಸ್ಟಿನ್ ಡಿಸೋಜ (ಮ್ಯಾನೇಜಿಂಗ್ ಟ್ರಸ್ಟಿ, ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟ್, ಮಂಗಳೂರು),
ಆಲ್ವಿನ್ ಡಿಸೋಜ( ಅಧ್ಯಕ್ಷರು, ಕ್ಯಾಥೊಲಿಕ್ ಸಭಾ, ಮಂಗಳೂರು ಪ್ರದೇಶ),
ಸಂತೋಷ್ ಕರ್ನೆಲಿಯೊ (ಅಧ್ಯಕ್ಷರು, ಕ್ಯಾಥೊಲಿಕ್ ಸಭಾ, ಉಡುಪಿ ಪ್ರದೇಶ),
ಮೆಲ್ವಿನ್ ಪೆರಿಸ್ (ಕೋಶಾಧಿಕಾರಿ, ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಶನ್, ಮಂಗಳೂರು) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು