2:29 AM Thursday2 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ಮಸ್ಕಿ: ಅಭಿನಂದನ್ ಸಂಸ್ಥೆಯಿಂದ ಕಾರ್ಗಿಲ್ ವಿಜಯ್ ಯಾತ್ರೆ; ಮೌನ ಪ್ರಾರ್ಥನೆ 

26/07/2021, 20:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಅಭಿನಂದನ್ ಸಂಸ್ಥೆಯ ವತಿಯಿಂದ ನೂರಾರು ಸೈನಿಕರ ಬಲಿದಾನದಿಂದಾಗಿ ದೊರೆತಂತಹ ಕಾರ್ಗಿಲ್ ಯುದ್ಧದಲ್ಲಿನ ವಿಜಯದ ನೆನಪಿಗಾಗಿ ಮಸ್ಕಿಯ ದೈವದ ಕಟ್ಟೆಯಿಂದ ವಿಜಯ್ ಯಾತ್ರೆಯನ್ನು ಕೈಗೊಳ್ಳಲಾಯಿತು. ಯುದ್ಧದಲ್ಲಿ ಮರಣ ಹೊಂದಿದ  ಯೋಧರಿಗೆ ಮೌನಾಚರಣೆಯ ಮೂಲಕ ಅವರ ಆತ್ಮಕ್ಕೆ ಶಾಂತಿಯನ್ನು ಕೋರಲಾಯಿತು. ಈ ಸಮಯದಲ್ಲಿ ಮಾತನಾಡಿದ ಯುವ ನಾಯಕರಾದ ಮೌನೇಶ ನಾಯಕ, 1999 ರಲ್ಲಿ ಪಾಕಿಸ್ತಾನದೊಂದಿಗೆ ನಡೆದ ಯುದ್ಧದಲ್ಲಿ ಭಾರತವು ಗಳಿಸಿದ ಯಶಸ್ಸನ್ನು ಆಚರಿಸುತ್ತಾ ಹಾಗೂ ಆ ಗೆಲುವಿಗಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಬಲಿದಾನವನ್ನು ಸ್ಮರಿಸುತ್ತಾ ನಮ್ಮ ದೇಶದ ಕೀರ್ತಿಯನ್ನು ಹೆಚ್ಚಿಸುವ ಕಾರ್ಯಗಳನ್ನು ಮಾಡಬೇಕು. ಈ ನಿಟ್ಟಿನಲ್ಲಿ ಇಂತಹ ಕೀರ್ತಿದಾಯಕ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಅಭಿನಂದನ್ ಸಂಸ್ಥೆಯು ಸತತವಾಗಿ ಸಾಮಾಜಿಕ ಸೇವೆಯ ಜೊತೆಗೆ ಪರಿಸರ ಸಂರಕ್ಷಣಾ ಕಾರ್ಯಗಳ ಮೂಲಕ ದೇಶ ಸೇವೆಯನ್ನು ಮಾಡುತ್ತಿರುವುದು ನಮ್ಮ ಮಸ್ಕಿಗೆ ಹೆಮ್ಮೆ ತರುವ ವಿಷಯವಾಗಿದೆ ಎಂದು ಹೇಳಿದರು. 

ಭಾರತ ಮಾತೆಗೆ ಪುಷ್ಪಾರ್ಪಣೆ ಮಾಡಿ ವಿಜಯೋತ್ಸವ ಆಚರಿಸಿ ನಂತರ ವೀರ ಯೋಧರಿಗೆ ಮೌನಾಚರಣೆಯ ಮೂಲಕ ಆತ್ಮಕ್ಕೆ ಶಾತಿಯನ್ನು ಕೋರಿ ಅಭಿನಂದನ್ ಗುರುಕುಲದ ಮಕ್ಕಳ ಜೊತೆಗೆ ಮಸ್ಕಿಯ ದೈವದ ಕಟ್ಟೆಯಿಂದ ಮಸ್ಕಿಯ ಪ್ರಮುಖ ರಸ್ತೆಯ ಮೂಲಕ ವಿಜಯ ಯಾತ್ರೆಯನ್ನು ಕೈಗೊಳ್ಳಲಾಯಿತು. ಈ ವಿಜಯ ಯಾತ್ರೆಯಲ್ಲಿ ಮಸ್ಕಿಯ ಗಣ್ಯರಾದ ಸೂಗಣ್ಣ ಬಾಳೇಕಾಯಿ, ವೆಂಕಟೇಶ ನಾಯಕ, ನಾಗರಾಜ ಯಂಬಲದ, ಮಹಾಂತೇಶ ಬ್ಯಾಳಿ, ಶಿವಪ್ರಸಾದ ಕ್ಯಾತನಟ್ಟಿ, ವಿನೋದ ಹಳ್ಳಿ, ರಾಕೇಶ ಪಾಟೀಲ್, ಅಮರೇಶ ಹರಸೂರು, ಶಿವಕುಮಾರ ಸ್ವಾಮಿ, ಅಭಿನಂದನ್ ಸಂಸ್ಥೆಯ ಸಂಸ್ಥಾಪಕರಾದ ರಾಮಣ್ಣ ಹಂಪರಗುಂದಿ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಮತ್ತು ಮಸ್ಕಿಯ ನಾಗರೀಕರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು