1:42 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಸ್ಕಿ: ಅಭಿನಂದನ್ ಸಂಸ್ಥೆಯಿಂದ ಕಾರ್ಗಿಲ್ ವಿಜಯ್ ಯಾತ್ರೆ; ಮೌನ ಪ್ರಾರ್ಥನೆ 

26/07/2021, 20:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಅಭಿನಂದನ್ ಸಂಸ್ಥೆಯ ವತಿಯಿಂದ ನೂರಾರು ಸೈನಿಕರ ಬಲಿದಾನದಿಂದಾಗಿ ದೊರೆತಂತಹ ಕಾರ್ಗಿಲ್ ಯುದ್ಧದಲ್ಲಿನ ವಿಜಯದ ನೆನಪಿಗಾಗಿ ಮಸ್ಕಿಯ ದೈವದ ಕಟ್ಟೆಯಿಂದ ವಿಜಯ್ ಯಾತ್ರೆಯನ್ನು ಕೈಗೊಳ್ಳಲಾಯಿತು. ಯುದ್ಧದಲ್ಲಿ ಮರಣ ಹೊಂದಿದ  ಯೋಧರಿಗೆ ಮೌನಾಚರಣೆಯ ಮೂಲಕ ಅವರ ಆತ್ಮಕ್ಕೆ ಶಾಂತಿಯನ್ನು ಕೋರಲಾಯಿತು. ಈ ಸಮಯದಲ್ಲಿ ಮಾತನಾಡಿದ ಯುವ ನಾಯಕರಾದ ಮೌನೇಶ ನಾಯಕ, 1999 ರಲ್ಲಿ ಪಾಕಿಸ್ತಾನದೊಂದಿಗೆ ನಡೆದ ಯುದ್ಧದಲ್ಲಿ ಭಾರತವು ಗಳಿಸಿದ ಯಶಸ್ಸನ್ನು ಆಚರಿಸುತ್ತಾ ಹಾಗೂ ಆ ಗೆಲುವಿಗಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಬಲಿದಾನವನ್ನು ಸ್ಮರಿಸುತ್ತಾ ನಮ್ಮ ದೇಶದ ಕೀರ್ತಿಯನ್ನು ಹೆಚ್ಚಿಸುವ ಕಾರ್ಯಗಳನ್ನು ಮಾಡಬೇಕು. ಈ ನಿಟ್ಟಿನಲ್ಲಿ ಇಂತಹ ಕೀರ್ತಿದಾಯಕ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಅಭಿನಂದನ್ ಸಂಸ್ಥೆಯು ಸತತವಾಗಿ ಸಾಮಾಜಿಕ ಸೇವೆಯ ಜೊತೆಗೆ ಪರಿಸರ ಸಂರಕ್ಷಣಾ ಕಾರ್ಯಗಳ ಮೂಲಕ ದೇಶ ಸೇವೆಯನ್ನು ಮಾಡುತ್ತಿರುವುದು ನಮ್ಮ ಮಸ್ಕಿಗೆ ಹೆಮ್ಮೆ ತರುವ ವಿಷಯವಾಗಿದೆ ಎಂದು ಹೇಳಿದರು. 

ಭಾರತ ಮಾತೆಗೆ ಪುಷ್ಪಾರ್ಪಣೆ ಮಾಡಿ ವಿಜಯೋತ್ಸವ ಆಚರಿಸಿ ನಂತರ ವೀರ ಯೋಧರಿಗೆ ಮೌನಾಚರಣೆಯ ಮೂಲಕ ಆತ್ಮಕ್ಕೆ ಶಾತಿಯನ್ನು ಕೋರಿ ಅಭಿನಂದನ್ ಗುರುಕುಲದ ಮಕ್ಕಳ ಜೊತೆಗೆ ಮಸ್ಕಿಯ ದೈವದ ಕಟ್ಟೆಯಿಂದ ಮಸ್ಕಿಯ ಪ್ರಮುಖ ರಸ್ತೆಯ ಮೂಲಕ ವಿಜಯ ಯಾತ್ರೆಯನ್ನು ಕೈಗೊಳ್ಳಲಾಯಿತು. ಈ ವಿಜಯ ಯಾತ್ರೆಯಲ್ಲಿ ಮಸ್ಕಿಯ ಗಣ್ಯರಾದ ಸೂಗಣ್ಣ ಬಾಳೇಕಾಯಿ, ವೆಂಕಟೇಶ ನಾಯಕ, ನಾಗರಾಜ ಯಂಬಲದ, ಮಹಾಂತೇಶ ಬ್ಯಾಳಿ, ಶಿವಪ್ರಸಾದ ಕ್ಯಾತನಟ್ಟಿ, ವಿನೋದ ಹಳ್ಳಿ, ರಾಕೇಶ ಪಾಟೀಲ್, ಅಮರೇಶ ಹರಸೂರು, ಶಿವಕುಮಾರ ಸ್ವಾಮಿ, ಅಭಿನಂದನ್ ಸಂಸ್ಥೆಯ ಸಂಸ್ಥಾಪಕರಾದ ರಾಮಣ್ಣ ಹಂಪರಗುಂದಿ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಮತ್ತು ಮಸ್ಕಿಯ ನಾಗರೀಕರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು