2:17 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು: ಪ್ರಪಾತಕ್ಕೆ ಉರುಳಿದ ಲಾರಿ; ಡ್ರೈವರ್- ಕ್ಲಿನರ್ ಪಾರು

16/09/2023, 10:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಮಂಜು ಮುಸುಕಿದ ಪರಿಣಾಮ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ನಡೆದಿದೆ.


ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ಸುತ್ತಮುತ್ತ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ನದಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಚಾರ್ಮಾಡಿ ಘಾಟ್ ನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಶುಕ್ರವಾರ ರಾತ್ರಿ ನೀರಿನ ಬಾಟಲ್ ತುಂಬಿದ ಲಾರಿ ಒಂದು ಮಂಜಿನಿಂದ ದಾರಿ ಕಾಣದೆ 100 ಅಡಿ ಪ್ರಪಾತಕ್ಕೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಪ್ರಾಣ ಉಳಿಸಿದ ಮರ: ಲಾರಿ ಬಿದ್ದ ಜಾಗದಲ್ಲಿ ಬೃಹತಾಕಾರದ ಮರವಿದ್ದು ಆ ಮರಕ್ಕೆ ಲಾರಿ ತಗಲಿ ನಿಂತಿದೆ. ಆ ಮರ ಇಲ್ಲದಿದ್ದರೆ ಸಾವಿರ ಅಡಿ ಪ್ರಪಾತಕ್ಕೆ ಲಾರಿ ಹೋಗಿ ಬೀಳುತ್ತಿತ್ತು.ಈ ಘಟನೆ ಚಾರ್ಮಾಡಿ ಘಾಟಿಯ ಸೋಮನ ಕಾಡು ಸಮೀಪ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು