3:22 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕಲರ್ ಫುಲ್ ಮಂಗಳೂರು: ಕಡಲನಗರಿಯ ಫುಟ್ ಪಾತ್ ನಲ್ಲಿ ಬಣ್ಣಬಣ್ಣದ ಹೂವಿನ ಚಿತ್ತಾರ!!

18/09/2023, 12:41

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಗಣೇಶ ಹಬ್ಬಕ್ಕೆ ಕಡಲ ಕಿನಾರೆಯ ಮಂಗಳೂರು ತೆರೆದುಕೊಳ್ಳಲಾರಂಭಿಸಿದೆ. ವಿವಿಧ ಸಂಘ- ಸಂಸ್ಥೆಗಳ ವತಿಯಿಂದ ನಡೆಯುವ ಸಾರ್ವಜನಿಕ ಗಣೇಶೋತ್ಸವಕ್ಕೆ ಅಂತಿಮ ಸಿದ್ಧತೆಗಳು ನಡೆಯುತ್ತಿದೆ. ಇದಕ್ಕೆಲ್ಲ ಬಹು ಮುಖ್ಯವಾದ ವಿವಿಧ ಜಾತಿಯ ಪುಷ್ಪಗಳು ಎರಡು ದಿನಗಳಿಂದ ನಗರಕ್ಕೆ ಬರಲಾರಂಭಿಸಿವೆ.
ಹೂವು ಇಲ್ಲದೆ ಯಾವುದೇ ಮಂಗಳ ಕಾರ್ಯವಿಲ್ಲ. ಮದುವೆ ಇರಲಿ, ಸೀಮಂತ ಇರಲಿ ಹೂವು ಬೇಕೇ ಬೇಕು. ಅದರಲ್ಲೂ ಆರಾಧಾನಾ ವಿಷಯದಲ್ಲಿ ಪುಷ್ಪವೇ ಫೈನಲ್. ಹೂವು ಇಲ್ಲದೆ ಯಾವುದೇ ದೇವ- ದೈವ ಕಾರ್ಯ ನಡೆಯೋದಿಲ್ಲ. ಬೇಲಿ ಬದಿಯ ಒಂದು ಹೂವನಾದ್ದರೂ ಇಟ್ಟು ನಾವು ದೇವರಿಗೆ ಕೈಮುಗಿಯುತ್ತೇವೆ. ಅದರಲ್ಲೂ ವಿಘ್ನ ನಿವಾರಕ ಎಂದು ಕರೆಸಿಕೊಳ್ಳುವ ವಿನಾಯಕನಿಗೆ ಅಲಂಕಾರ ಮಾಡಿದಷ್ಟು ಭಕ್ತರಿಗೆ ತೃಪ್ತಿಯಾಗುವುದಿಲ್ಲ.


ಮಂಗಳೂರಿಗೆ ಹೊರ ಜಿಲ್ಲೆಗಳಿಂದ ಲಾರಿಗಟ್ಟಲೆ ಈಗಾಗಲೇ ಪುಷ್ಪವು ಹರಿದು ಬಂದಿದೆ. ನಗರದ ಆಯಕಟ್ಟಿನ ಪ್ರದೇಶದ ಫುಟ್ ಪಾತ್ ಗಳಿಗೆ ಲೋಡುಗಟ್ಟಲೆ ಹೂವು ಲಗ್ಗೆ ಇಟ್ಟಿದೆ. ಕೆಲವು ಕಡೆಗಳಲ್ಲಿ ಫುಟ್ ಪಾತ್ ಗಳನ್ನೇ ಹೂವಿನ‌ ರಾಶಿ ನುಂಗಿ ಹಾಕಿದೆ. ಇನ್ನು ಕೆಲವು ಕಡೆ ಫುಟ್ ಪಾತ್ ಮೀರಿ ರಸ್ತೆಗೆ ಚಾಚಿದೆ. ವಿಜಯನಗರ ಆಡಳಿತ ಕಾಲದಲ್ಲಿ ಮುತ್ತು ರತ್ನಗಳನ್ನು ಮಾರ್ಗದ ಬದಿಯಲ್ಲಿಟ್ಟು ಮಾರಾಟ ಮಾಡುತ್ತಿದ್ದಂತೆ ಇಂದಿನ ಕಾಲದಲ್ಲಿ ಕಡಲನಗರಿಯಲ್ಲಿ ಪುಷ್ಪವನ್ನಿಟ್ಟು ವ್ಯಾಪಾರ ಮಾಡಲಾಗುತ್ತಿದೆ. ಆದರೆ ಹೂವು ಮಾತ್ರ ಬಲು ದುಬಾರಿ.
ಸೇವಂತಿಗೆ ಗುಚ್ಚಕ್ಕೆ 800 ರೂಪಾಯಿ, ಕಾಕಡ ಗುಚ್ಚ -1300, ಜೀನ್ಯ ಗುಚ್ಚ -1500 ಮಾರಾಟವಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ವ್ಯಾಪಾರಿಗಳು ಹೇಳಿದ್ದೇ ರೇಟ್. ಹಬ್ಬದ ಸಂದರ್ಭದಲ್ಲಿ ಯಾವುದೇ ಚೌಕಾಶಿ ಕುದುರುವುದಿಲ್ಲ.


ಚೌತಿಗೆ ಸಂಬಂಧಿಸಿದಂತೆ ಶಾಪಿಂಗ್ ಭಾನುವಾರದಿಂದಲೇ ಮಂಗಳೂರಿನಲ್ಲಿ ಆರಂಭವಾಗಿದೆ. ಭಾನುವಾರ ಸಂಜೆ ಸೆಂಟ್ರಲ್ ಮಾರ್ಕೆಟ್ ಪ್ರದೇಶ ಫುಲ್ ಪ್ಯಾಕ್ ಆಗಿತ್ತು. ದ್ವಿಚಕ್ರ, ತ್ರಿಚಕ್ರದವರು ಎಲ್ಲೆಂದರಲ್ಲಿ ನುಗ್ಗಿಸಿ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಒಬ್ಬನೇ ಒಬ್ಬ ಟ್ರಾಫಿಕ್ ಪೊಲೀಸ್ ಸೆಂಟ್ರಲ್ ಮಾರ್ಕೆಟ್ ಪ್ರದೇಶದಲ್ಲಿ ಭಾನುವಾರ ಸಂಜೆ ವೇಳೆ ಕಂಡು ಬರಲಿಲ್ಲ. ಹಾಗೆ ಮಾಲ್ ಗಳು ರಶ್ ಇತ್ತು. ಹಬ್ಬಕ್ಕೆ ಹೊಸ ಬಟ್ಟೆ ಖರೀದಿಗೆ ಬಂದಿದ್ದರು. ಒಟ್ಟಿನಲ್ಲಿ ಮಂಗಳೂರು ಕಲರ್ ಫುಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು