1:32 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಭೀಕರ ಬೆಂಕಿ ಅನಾಹುತ; ಗೋದಾಮು ಮತ್ತು 8 ಮನೆಗಳು ಭಸ್ಮ

18/09/2023, 17:16

ಬೆಂಗಳೂರು(reporterkarnataka.com): ನಗರದ ಚಾಮರಾಜಪೇಟೆಯ ಅನಂತಪುರದ ಬಳಿ
ಸಿಲಿಂಡರ್ ಸ್ಫೋಟಗೊಂಡು ಗೋದಾಮು ಮತ್ತು 8 ಮನೆಗಳು ಭಸ್ಮಗೊಂಡಿರುವ ಘಟನೆ ನಡೆದಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಬೆಂಗಳೂರಿನ ವಿನಾಯಕ ಸಿನೆಮಾ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದ್ದು,
ಸಿಲಿಂಡರ್‌ ಸ್ಪೋಟದ ಭೀಕರತೆಗೆ ಅಲಂಕಾರಿಕ ವಸ್ತುಗಳ ಗೋದಾಮು ಮತ್ತು 8 ತಗಡಿನ ಶೀಟ್ ಮನೆಗಳು ಭಸ್ಮವಾಗಿವೆ. ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿಶಾಮಕ ದಳ ಬೆಂಕಿ ನದಿಸುವ ಕಾರ್ಯ ಮಾಡಿದ್ದಾರೆ. ಈ ಅವಘಡದಲ್ಲಿ ಗೋದಾಮು ಸೇರಿದಂತೆ ಪಕ್ಕದಲ್ಲಿರುವ 8 ಮನೆಗಳಿಗೂ ಬೆಂಕಿ ತಗುಲಿದ್ದು, ಈ ವೇಳೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ವಿನಾಯಕ ಸಿನಿಮಾ ಥಿಯೇಟರ್‌ ಎದುರುಗಡೆ ಇರುವ ಗೋದಾಮಿಗೆ ಬೆಂಕಿ ತಲುಗಿದ ಹಿನ್ನೆಲೆ ಸಿಲಿಂಡರ್‌ಗಳು ಬ್ಲಾಸ್ಟ್ ಆಗಿರಬಹುದು ಎಂದು ಶಂಕಿಸಲಾಗುತ್ತಿದೆ. ಅಲ್ಲದೆ ಮನೆಯ ಅಲಂಕಾರಿಕ ವಸ್ತುಗಳ ಗೋದಾಮಿಗೆ ಬೆಂಕಿ ತಗುಲಿದ್ದು, ಬೆಂಕಿ ತಗಲುತ್ತಿದ್ದಂತೆ ಅದರ ಪಕ್ಕದಲ್ಲಿರುವ ಸುಮಾರು 8 ಶೀಟ್ ಮನೆಗಳಿಗೂ ಬೆಂಕಿ ಆವರಿಸಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು