5:06 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಅಥಣಿ ಹಲ್ಯಾಳದಲ್ಲಿ ಸಂಭ್ರಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ಪಲ್ಲಕ್ಕಿ ಮೆರವಣಿಗೆ

19/09/2023, 21:06

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಗ್ರಾಮದೇವತೆಯಾದ ಶ್ರೀ ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.
ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರವಚನ ಕಾರ್ಯಕ್ರಮವು ಜರುಗಿದವು. ಇಂದು ಮುಂಜಾನೆ ದೇವರ ಶಿವರಾಯ ಮುತ್ಯಾ ಗದ್ದುಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಜರುಗಿತು. ನಂತರದಲ್ಲಿ ಗ್ರಾಮದ ಬೀದಿಗಳಲ್ಲಿ ಶ್ರೀ ಶಿವರಾಮ್ ಮುತ್ಯ ಪಲ್ಲಕ್ಕಿ ಮೆರವಣಿಗೆಯು ಜರಗಿತು. ನೂರಾರು ಭಕ್ತರು ಭಂಡಾರದಲ್ಲಿ ಮಿಂದೆದು ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
ಗ್ರಾಮದ ಹೃದಯ ಭಾಗದಲ್ಲಿ ದೇವರ ಪಲ್ಲಕ್ಕಿಯನ್ನು ಇರಿಸಿ ಅಲಗ ಹಾಯುವ ಕಾರ್ಯಕ್ರಮ ಜರಗಿತು ಇದೇ ಸಂದರ್ಭದಲ್ಲಿ ಗ್ರಾಮಗಳಿಂದ ಆಗಮಿಸಿದ ಭಕ್ತರು ಶಿವರಾಯ ಮುತ್ಯಾ ದರ್ಶನ ಪಡೆದರು.


ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಚಿದಾನಂದ ಮುಕಣಿ, ಸಿದ್ದಪ್ಪಾ ಲೋಕುರ್,ಮುತ್ತಪ್ಪ ಸನದಿ, ಶಿವರಾಯ ಮಗದುಮ್ಮ, ಗುಂಡು ಹಿರೇಕುರುಬರ್, ಹಣಮಂತ ಲೋಕುರ, ತಿಪ್ಪಣ್ಣ ಹಿರೇಕುರಬರ, ಸುರೇಶ ಬಾಗಿ,ವಿನೋದ ನಾಯಿಕ, ಶ್ರೀಶೈಲ ನಾಯಿಕ ಗ್ರಾಮದ ನೂರಾರು ಭಕ್ತರು ಈ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು