6:25 PM Monday15 - June 2026
ಬ್ರೇಕಿಂಗ್ ನ್ಯೂಸ್
ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:…

ಇತ್ತೀಚಿನ ಸುದ್ದಿ

ಅಥಣಿ ಹಲ್ಯಾಳದಲ್ಲಿ ಸಂಭ್ರಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ಪಲ್ಲಕ್ಕಿ ಮೆರವಣಿಗೆ

19/09/2023, 21:06

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಗ್ರಾಮದೇವತೆಯಾದ ಶ್ರೀ ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.
ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರವಚನ ಕಾರ್ಯಕ್ರಮವು ಜರುಗಿದವು. ಇಂದು ಮುಂಜಾನೆ ದೇವರ ಶಿವರಾಯ ಮುತ್ಯಾ ಗದ್ದುಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಜರುಗಿತು. ನಂತರದಲ್ಲಿ ಗ್ರಾಮದ ಬೀದಿಗಳಲ್ಲಿ ಶ್ರೀ ಶಿವರಾಮ್ ಮುತ್ಯ ಪಲ್ಲಕ್ಕಿ ಮೆರವಣಿಗೆಯು ಜರಗಿತು. ನೂರಾರು ಭಕ್ತರು ಭಂಡಾರದಲ್ಲಿ ಮಿಂದೆದು ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
ಗ್ರಾಮದ ಹೃದಯ ಭಾಗದಲ್ಲಿ ದೇವರ ಪಲ್ಲಕ್ಕಿಯನ್ನು ಇರಿಸಿ ಅಲಗ ಹಾಯುವ ಕಾರ್ಯಕ್ರಮ ಜರಗಿತು ಇದೇ ಸಂದರ್ಭದಲ್ಲಿ ಗ್ರಾಮಗಳಿಂದ ಆಗಮಿಸಿದ ಭಕ್ತರು ಶಿವರಾಯ ಮುತ್ಯಾ ದರ್ಶನ ಪಡೆದರು.


ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಚಿದಾನಂದ ಮುಕಣಿ, ಸಿದ್ದಪ್ಪಾ ಲೋಕುರ್,ಮುತ್ತಪ್ಪ ಸನದಿ, ಶಿವರಾಯ ಮಗದುಮ್ಮ, ಗುಂಡು ಹಿರೇಕುರುಬರ್, ಹಣಮಂತ ಲೋಕುರ, ತಿಪ್ಪಣ್ಣ ಹಿರೇಕುರಬರ, ಸುರೇಶ ಬಾಗಿ,ವಿನೋದ ನಾಯಿಕ, ಶ್ರೀಶೈಲ ನಾಯಿಕ ಗ್ರಾಮದ ನೂರಾರು ಭಕ್ತರು ಈ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು