4:16 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಅಥಣಿ ಹಲ್ಯಾಳದಲ್ಲಿ ಸಂಭ್ರಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ಪಲ್ಲಕ್ಕಿ ಮೆರವಣಿಗೆ

19/09/2023, 21:06

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಗ್ರಾಮದೇವತೆಯಾದ ಶ್ರೀ ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.
ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರವಚನ ಕಾರ್ಯಕ್ರಮವು ಜರುಗಿದವು. ಇಂದು ಮುಂಜಾನೆ ದೇವರ ಶಿವರಾಯ ಮುತ್ಯಾ ಗದ್ದುಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಜರುಗಿತು. ನಂತರದಲ್ಲಿ ಗ್ರಾಮದ ಬೀದಿಗಳಲ್ಲಿ ಶ್ರೀ ಶಿವರಾಮ್ ಮುತ್ಯ ಪಲ್ಲಕ್ಕಿ ಮೆರವಣಿಗೆಯು ಜರಗಿತು. ನೂರಾರು ಭಕ್ತರು ಭಂಡಾರದಲ್ಲಿ ಮಿಂದೆದು ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
ಗ್ರಾಮದ ಹೃದಯ ಭಾಗದಲ್ಲಿ ದೇವರ ಪಲ್ಲಕ್ಕಿಯನ್ನು ಇರಿಸಿ ಅಲಗ ಹಾಯುವ ಕಾರ್ಯಕ್ರಮ ಜರಗಿತು ಇದೇ ಸಂದರ್ಭದಲ್ಲಿ ಗ್ರಾಮಗಳಿಂದ ಆಗಮಿಸಿದ ಭಕ್ತರು ಶಿವರಾಯ ಮುತ್ಯಾ ದರ್ಶನ ಪಡೆದರು.


ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಚಿದಾನಂದ ಮುಕಣಿ, ಸಿದ್ದಪ್ಪಾ ಲೋಕುರ್,ಮುತ್ತಪ್ಪ ಸನದಿ, ಶಿವರಾಯ ಮಗದುಮ್ಮ, ಗುಂಡು ಹಿರೇಕುರುಬರ್, ಹಣಮಂತ ಲೋಕುರ, ತಿಪ್ಪಣ್ಣ ಹಿರೇಕುರಬರ, ಸುರೇಶ ಬಾಗಿ,ವಿನೋದ ನಾಯಿಕ, ಶ್ರೀಶೈಲ ನಾಯಿಕ ಗ್ರಾಮದ ನೂರಾರು ಭಕ್ತರು ಈ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು