11:08 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಥಣಿ ಹಲ್ಯಾಳದಲ್ಲಿ ಸಂಭ್ರಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ಪಲ್ಲಕ್ಕಿ ಮೆರವಣಿಗೆ

19/09/2023, 21:06

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಗ್ರಾಮದೇವತೆಯಾದ ಶ್ರೀ ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.
ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರವಚನ ಕಾರ್ಯಕ್ರಮವು ಜರುಗಿದವು. ಇಂದು ಮುಂಜಾನೆ ದೇವರ ಶಿವರಾಯ ಮುತ್ಯಾ ಗದ್ದುಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಜರುಗಿತು. ನಂತರದಲ್ಲಿ ಗ್ರಾಮದ ಬೀದಿಗಳಲ್ಲಿ ಶ್ರೀ ಶಿವರಾಮ್ ಮುತ್ಯ ಪಲ್ಲಕ್ಕಿ ಮೆರವಣಿಗೆಯು ಜರಗಿತು. ನೂರಾರು ಭಕ್ತರು ಭಂಡಾರದಲ್ಲಿ ಮಿಂದೆದು ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
ಗ್ರಾಮದ ಹೃದಯ ಭಾಗದಲ್ಲಿ ದೇವರ ಪಲ್ಲಕ್ಕಿಯನ್ನು ಇರಿಸಿ ಅಲಗ ಹಾಯುವ ಕಾರ್ಯಕ್ರಮ ಜರಗಿತು ಇದೇ ಸಂದರ್ಭದಲ್ಲಿ ಗ್ರಾಮಗಳಿಂದ ಆಗಮಿಸಿದ ಭಕ್ತರು ಶಿವರಾಯ ಮುತ್ಯಾ ದರ್ಶನ ಪಡೆದರು.


ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಚಿದಾನಂದ ಮುಕಣಿ, ಸಿದ್ದಪ್ಪಾ ಲೋಕುರ್,ಮುತ್ತಪ್ಪ ಸನದಿ, ಶಿವರಾಯ ಮಗದುಮ್ಮ, ಗುಂಡು ಹಿರೇಕುರುಬರ್, ಹಣಮಂತ ಲೋಕುರ, ತಿಪ್ಪಣ್ಣ ಹಿರೇಕುರಬರ, ಸುರೇಶ ಬಾಗಿ,ವಿನೋದ ನಾಯಿಕ, ಶ್ರೀಶೈಲ ನಾಯಿಕ ಗ್ರಾಮದ ನೂರಾರು ಭಕ್ತರು ಈ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು