6:22 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಗಗನ್ ಕಡೂರು ಮನೆಯಲ್ಲಿ ಸ್ಥಳ ಮಹಜರು, ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಪರಿಶೀಲನೆ

19/09/2023, 22:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚೈತ್ರಾ ಕುಂದಾಪುರ ಡೀಲ್ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿರುವ ಗಗನ್ ಕಡೂರು ಅವರನ್ನು ಸಿಸಿಬಿ ಪೊಲೀಸರು ಸ್ಥಳ ಮಹಜರಿಗೆ ಮಂಗಳವಾರ ಕಡೂರಿಗೆ ಕರೆತಂದರು.
ಗಗನ್ ಮನೆಯಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದರು. ರಮೇಶ್ ಗೆ ವಿಶ್ವನಾಥ್ ಜೀ ಆಗಲು ಟ್ರೈನಿಂಗ್ ನೀಡಿದ್ದೇ ಇದೇ
ಗಗನ್ ಮನೆಯಲ್ಲಿ. ಗಗನ್ ಮನೆಯಲ್ಲಿ ವಿಚಾರಣೆ ಹಾಗೂ ಸ್ಪಾಟ್ ಮಹಜರ್ ಮಾಡಿದರು.
ಕಡೂರು ಪಟ್ಟಣದ ಫಾರೆಸ್ಟ್ ಆಫೀಸ್ ಬಳಿ ಗಗನ್ ಮನೆ ಇದೆ
ಜಿಲ್ಲೆಯ ವಿವಿಧ ಕಡೆ ಸ್ಥಳ ಮಹಜರು ಸಿಸಿಬಿ ಪೊಲೀಸರು ನಡೆಸಿದರು.


ಚಿಕ್ಕಮಗಳೂರು ಐಬಿ, ಕಡೂರಿನ ಕನಕ ವೃತ್ತದ ಬಳಿ ಇರುವ ಗಗನ್ ಮನೆ, ಕೆ.ಎಂ.ರಸ್ತೆಯಲ್ಲಿರುವ ಎಚ್ ಡಿಎಫ್ ಸಿ ಬ್ಯಾಂಕ್ ನಲ್ಲಿ ಸ್ಥಳ ಮಹಜರು ನಡೆಸಲಾಯಿತು.
ಎಚ್ ಡಿಎಫ್ ಸಿ ಬ್ಯಾಂಕಿನ ಅಕೌಂಟ್ ಪರಿಶೀಲನೆ ನಡೆಸಲಾಯಿತು. ಅಕೌಂಟ್ ನಲ್ಲಿ ಹಣ ವರ್ಗಾವಣೆ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು.
ನಂತರ ಎಪಿಎಂಸಿ, ಪ್ರವಾಸಿ ಮಂದಿರ ಸ್ಥಳಗಳಲ್ಲಿ ಮಹಜರು
ನಡೆಸಲಾಯಿತು. ದೊಡ್ಡಪೇಟೆಯಲ್ಲಿರುವ ಕಟಿಂಗ್ ಶಾಪ್ ಗೂ ಪೊಲೀಸರು ತೆರಳಲಿದರು.
ನಂತರ ಸಿಸಿಬಿ ಪೊಲೀಸರ ತಂಡ ಮತ್ತೆ ಶಿವಮೊಗ್ಗಕ್ಕೆ ತೆರಳಿತು.

ಇತ್ತೀಚಿನ ಸುದ್ದಿ

ಜಾಹೀರಾತು