10:28 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಗಗನ್ ಕಡೂರು ಮನೆಯಲ್ಲಿ ಸ್ಥಳ ಮಹಜರು, ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಪರಿಶೀಲನೆ

19/09/2023, 22:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚೈತ್ರಾ ಕುಂದಾಪುರ ಡೀಲ್ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿರುವ ಗಗನ್ ಕಡೂರು ಅವರನ್ನು ಸಿಸಿಬಿ ಪೊಲೀಸರು ಸ್ಥಳ ಮಹಜರಿಗೆ ಮಂಗಳವಾರ ಕಡೂರಿಗೆ ಕರೆತಂದರು.
ಗಗನ್ ಮನೆಯಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದರು. ರಮೇಶ್ ಗೆ ವಿಶ್ವನಾಥ್ ಜೀ ಆಗಲು ಟ್ರೈನಿಂಗ್ ನೀಡಿದ್ದೇ ಇದೇ
ಗಗನ್ ಮನೆಯಲ್ಲಿ. ಗಗನ್ ಮನೆಯಲ್ಲಿ ವಿಚಾರಣೆ ಹಾಗೂ ಸ್ಪಾಟ್ ಮಹಜರ್ ಮಾಡಿದರು.
ಕಡೂರು ಪಟ್ಟಣದ ಫಾರೆಸ್ಟ್ ಆಫೀಸ್ ಬಳಿ ಗಗನ್ ಮನೆ ಇದೆ
ಜಿಲ್ಲೆಯ ವಿವಿಧ ಕಡೆ ಸ್ಥಳ ಮಹಜರು ಸಿಸಿಬಿ ಪೊಲೀಸರು ನಡೆಸಿದರು.


ಚಿಕ್ಕಮಗಳೂರು ಐಬಿ, ಕಡೂರಿನ ಕನಕ ವೃತ್ತದ ಬಳಿ ಇರುವ ಗಗನ್ ಮನೆ, ಕೆ.ಎಂ.ರಸ್ತೆಯಲ್ಲಿರುವ ಎಚ್ ಡಿಎಫ್ ಸಿ ಬ್ಯಾಂಕ್ ನಲ್ಲಿ ಸ್ಥಳ ಮಹಜರು ನಡೆಸಲಾಯಿತು.
ಎಚ್ ಡಿಎಫ್ ಸಿ ಬ್ಯಾಂಕಿನ ಅಕೌಂಟ್ ಪರಿಶೀಲನೆ ನಡೆಸಲಾಯಿತು. ಅಕೌಂಟ್ ನಲ್ಲಿ ಹಣ ವರ್ಗಾವಣೆ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು.
ನಂತರ ಎಪಿಎಂಸಿ, ಪ್ರವಾಸಿ ಮಂದಿರ ಸ್ಥಳಗಳಲ್ಲಿ ಮಹಜರು
ನಡೆಸಲಾಯಿತು. ದೊಡ್ಡಪೇಟೆಯಲ್ಲಿರುವ ಕಟಿಂಗ್ ಶಾಪ್ ಗೂ ಪೊಲೀಸರು ತೆರಳಲಿದರು.
ನಂತರ ಸಿಸಿಬಿ ಪೊಲೀಸರ ತಂಡ ಮತ್ತೆ ಶಿವಮೊಗ್ಗಕ್ಕೆ ತೆರಳಿತು.

ಇತ್ತೀಚಿನ ಸುದ್ದಿ

ಜಾಹೀರಾತು