4:09 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

16 ಎಎಸ್‌ಐಗಳಿಗೆ ಪಿಎಸ್‌ಐಗಳಾಗಿ ಬಡ್ತಿ: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ

20/09/2023, 15:36

ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಬಡ್ತಿ ನೀಡಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ಪಿಎಸ್‌ಐ ಬಡ್ತಿಯಾಗಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ , ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಕದ್ರಿ ಸಂಚಾರ ಠಾಣೆಗೆ, ಕದ್ರಿ ಠಾಣೆಯ ಶಾಂತಪ್ಪ ಜಿ. ಕಂಕನಾಡಿ ನಗರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಕೃಷ್ಣಪ್ಪ ಮೂಡುಬಿದಿರೆ ಠಾಣೆಗೆ, ಉತ್ತರ ಠಾಣೆಯ ಶಿವಪ್ಪ ಗೌಡ ಅದೇ ಠಾಣೆಗೆ ನಿಯೋಜನೆಗೊಂಡಿದ್ದಾರೆ.

ಉರ್ವ ಠಾಣೆಯ ಉಲ್ಲಾಸ್ ಪಾಂಡುರಂಗ ಬರ್ಕೆ ಠಾಣೆಗೆ, ಉತ್ತರ ಠಾಣೆಯ ಓಂ ದಾಸ್ ಸೆನ್ ಠಾಣೆಗೆ, ಐಎಸ್ಡಿಯ ರವಳೇಂದ್ರ ಗ್ರಾಮಾಂತರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಶಶಿಧರ ಶೆಟ್ಟಿ ಸುರತ್ಕಲ್ ಠಾಣೆಗೆ, ಉಳ್ಳಾಲ ಠಾಣೆಯ ಪ್ರಾಣೇಶ್ ಕುಮಾರ್ ಬಿ. ಅದೇ ಠಾಣೆಗೆ, ಸೆನ್ ಠಾಣೆಯ ಮೋಹನ್ ಅದೇ ಠಾಣೆಗೆ, ಸಿಸಿಬಿಯ ಹರೀಶ್ ಪದವಿನಂಗಡಿ ಸಿಎಸ್ಬಿಗೆ, ದಕ್ಷಿಣ ಠಾಣೆಯ ಪುರಂದರ ಬಿ.ಪಿ. ಸಿಸಿಆರ್ಬಿಗೆ ಪಿಎಸ್‌ಐ ಹುದ್ದೆಗೆ ನೇಮಕ ಮಾಡಿ ವರ್ಗಾಯಿಸಲಾಗಿದೆ.
ಈ ಹಿಂದಿನ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹಾಗೂ ಕುಲದೀಪ್ ಕುಮಾರ್ ಜೈನ್ ಅವರು ಹಲವು ವರ್ಷ ಗಳಿಂದ ಬಾಕಿ ಉಳಿದಿದ್ದ ಎಎಸ್‌ಐಗಳಿಗೆ ಬಡ್ತಿ ನೀಡಲು ಪ್ರಯತ್ನಿಸಿದ್ದರು. ಆದರೆ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ನೂತನ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಅಧಿಕಾರ ಸ್ವೀಕರಿಸಿ 9 ದಿನಗಳಲ್ಲಿ ಮುಂಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು