12:50 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಜಲಾವೃತಗೊಂಡ ಮನೆಯಿಂದ ಸಾಮಗ್ರಿ ಸ್ಥಳಾಂತರ ವೇಳೆ ದುರ್ಘಟನೆ: ಪ್ರವಾಹಕ್ಕೆ ಕೊಚ್ಚಿ ಹೋದ ರೈತ

27/07/2021, 13:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಸಮೀಪ ಮನೆಯ ಸಾಮಗ್ರಿ, ದನಕರು ಸ್ಥಳಾಂತರ ವೇಳೆ ನದಿಯ ನೀರಿನಲ್ಲಿ ಸವದಿ ಗ್ರಾಮದ ರಾಮಗೌಡ ಸಿದಗೌಡ ಪಾಟೀಲ(55) ಕೊಚ್ಚಿ ಹೋದ ದುರ್ಘಟನೆ ಭಾನುವಾರ ಸಂಜೆ ನಡೆದಿದೆ.

ಘಟನಾ ಸ್ಥಳಕ್ಕೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಹಾಗೂ ಚಿಕ್ಕೋಡಿ ಸಹಾಯಕ ಕಮಿಷರ್ ಯುಕೇಶ ಕುಮಾರ ಬೇಟಿ ನೀಡಿ ಘಟನೆಯ ಮಾಹಿತಿ ಪಡೆದರು.ಕುಟುಂಬದ ಸದಸ್ಯರಿಗೆ ದೈರ್ಯ ತುಂಬಿದರು.


ಅನಂತರ ಮಾತನಾಡಿದ ಶಾಸಕ ಮಹೇಶ ಕುಮಟಳ್ಳಿ, ಹೆಚ್ಚಾದ ನೀರಿನ ಸೆಳೆತದಿಂದ ಎಲ್ಲೆಲ್ಲಿ ಕಬ್ಬು ಬೆಳೆಯಲಾಗಿದೆಯೋ ಅಲ್ಲೆಲ್ಲಾ ಕೆಸರು ಬಂದಿದ್ದು, ಸಾರ್ವಜನಿಕರು ವಿನಾಃ ಕಾರಣ ನೀರಿಗೆ ಇಳಿಯಬಾರದು. ಹಾಗೆ ಪ್ರವಾಹದ ಬಗ್ಗೆ ಎಲ್ಲ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ತಾಲೂಕಿನ ಅಧಿಕಾರಿಗಳಿಗೆ ತಿಳಿಸಿದರು.


ಈ ವೇಳೆ ಮಲಗೌಡ ಪಾಟೀಲ, ತಹಶೀಲ್ದಾರ ದುಂಡಪ್ಪಾ ಕೋಮಾರ, ತಾಪಂ ಅಧಿಕಾರಿ ಶೇಖರ ಕರಬಸಪ್ಪಗೋಳ, ಡಿವೈಎಸ್ಪಿ ಎಸ್ ವಿ ಗಿರೀಶ, ಸಿಪಿಐ ಶಂಕರಗೌಡ ಬಸನಗೌಡರ, ಉಪತಹಶಿಲ್ದಾರ ಮಹಾದೇವ ಬಿರಾದಾರಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು