1:31 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಅಕ್ಟೋಬರ್ 15ರಂದು ಮಂಗಳೂರಿನಲ್ಲಿ ಡಿವೈಎಫ್ಐ 14ನೇ ದ.ಕ. ಜಿಲ್ಲಾ ಸಮ್ಮೇಳನ: ಲೋಗೋ ಅನಾವರಣ

21/09/2023, 19:46

ಮಂಗಳೂರು(reporterkarnataka.com): ಶಿಕ್ಷಣ, ಉದ್ಯೋಗ, ಆರೋಗ್ಯದ ಹಕ್ಕಿಗಾಗಿ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ಎಂಬ ಘೋಷಣೆಯಡಿ ಡಿವೈಎಫ್ಐ ಯುವಜನ ಸಂಘಟನೆಯ 14ನೇ ದ.ಕ ಜಿಲ್ಲಾ ಸಮ್ಮೇಳನ ಅಕ್ಟೋಬರ್ 15ರಂದು ಮಂಗಳೂರಿನಲ್ಲಿ ನಡೆಯಲಿರುವುದು.
ಜಿಲ್ಲೆಯ ವಿವಿಧ ಭಾಗಗಳಿಂದ ಆಯ್ಕೆಯಾದ ಯುವ ಪ್ರತಿನಿಧಿಗಳು ಭಾಗವಹಿಸಿ ನಾಡಿನ ಜನಸಾಮಾನ್ಯರ ಬದುಕಿನಲ್ಲಿ ನೆಮ್ಮದಿ ಮೂಡಿಸುವ ನಿಟ್ಟಿನಲ್ಲಿ ಎದುರಾಗುವ ಸಮಸ್ಯೆಗಳು ಮತ್ತು ಅನ್ಯಾಯಗಳ ವಿರುದ್ಧ ಹೋರಾಡುವ, ಶಿಕ್ಷಣದಿಂದ ವಂಚಿತ ಹಾಗೂ ನಿರುದ್ಯೋಗದಿಂದ ಬಳಲುತ್ತಿರುವ ಯುವಜನರ ಸಮಸ್ಯೆಗಳಿಗೆ ಮಾರ್ಗೋಪಾಯವನ್ನು ಕಂಡುಕೊಳ್ಳುವ ಮತ್ತವುಗಳ ವಿರುದ್ಧ ರಾಜಿರಹಿತ ಹೋರಾಟಗಳನ್ನು ಸಂಘಟಿಸುವ ಕುರಿತು ಚರ್ಚಿಸಲು ಡಿವೈಎಫ್ಐ ದ.ಕ. ಜಿಲ್ಲಾ ಸಮ್ಮೇಳನವು ನಡೆಯಲಿರುವುದು.
ಇಂದು ಡಿವೈಎಫ್ಐ ಕಚೇರಿಯಲ್ಲಿ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ 14 ನೇ ದ.ಕ ಜಿಲ್ಲಾ ಸಮ್ಮೇಳನದ ಲೋಗೋವನ್ನು ಅನಾವರಣಗೊಳಿಸಲಾಯಿತು. ಈ ವೇಳೆ ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ. ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಕೋಶಾಧಿಕಾರಿ ಮನೋಜ್ ವಾಂಮಜೂರು, ಪದಾಧಿಕಾರಿಗಳಾದ ರಫೀಕ್ ಹರೇಕಳ, ನವೀನ್ ಕೊಂಚಾಡಿ, ನಿತಿನ್ ಕುತ್ತಾರ್ , ಆಶಾ ಬೋಳೂರು, ಸುನಿಲ್ ತೇವುಲ, ತಯ್ಯೂಬ್ ಬೆಂಗರೆ, ಶ್ರೀನಾಥ್ ಕಾಟಿಪಳ್ಳ, ಚರಣ್ ಶೆಟ್ಟಿ,‌ ರಿಯಾಝ್ ಮೂಡಬಿದ್ರೆ, ರಿಜ್ವಾನ್ ಹರೇಕಳ ಮುಂತಾದವರು ಉಪಸ್ಥಿತರಿದರು.

ಇತ್ತೀಚಿನ ಸುದ್ದಿ

ಜಾಹೀರಾತು