3:24 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ನಾಯಕನಲ್ಲಿ ನಾಯಕತ್ವ ಗುಣ ಇರಬೇಕು; ಎನ್ನೆಸ್ಸೆಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳಿಸುತ್ತದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ

21/09/2023, 21:45

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಮ್ಮ ನಡುವೆ ಅನೇಕ ಲೀಡರ್ ಗಳು ಇದ್ದಾರೆ. ಆದರೆ ನಾಯಕತ್ವ ಗುಣ ಇರುವುದಿಲ್ಲ. ನಾಯಕನಾದ ವ್ಯಕ್ತಿಯಲ್ಲಿ ನಾಯಕತ್ವ ಗುಣ ಇರಬೇಕು. ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವವನ್ನು ಬೆಳೆಸುತ್ತದೆ ಎಂದು ಮಾಜಿ ಸೈನಿಕ,ರಾಜಕೀಯ ನಾಯಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಅವರು ನಗರದ ಎಸ್ ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.



ಮುಖ್ಯ ಅತಿಥಿ ಮಂಗಳೂರು ನಗರ ಪೊಲೀಸ್ ಡಿಸಿಪಿ ದಿನೇಶ್ ಕುಮಾರ್ ಅವರು ಮಾತನಾಡಿ, ದುಶ್ಚಟಗಳಿಂದ ದೂರವಿರಿ. ನಿಮ್ಮ ಅಮೂಲ್ಯ ಕಾಲೇಜು ಜೀವನ ಹಾಳು ಮಾಡಿಕೊಳ್ಳಬೇಡಿ,ಮಾದಕ ವ್ಯಸನವನ್ನು ಮಂಗಳೂರು ನಗರ ದಿಂದ ತೊಡೆದು ಹಾಕಬೇಕು. ಮಂಗಳೂರನ್ನು ಮಾದಕ ವ್ಯಸನ ಮುಕ್ತ ಮಾಡಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಆದರೆ ನೀವು ಕೈ ಜೋಡಿಸಿದಾಗ ಮಾತ್ರ ಡ್ರಗ್ಸ್ ನ್ನು ಮಂಗಳೂರು ನಗರದಿಂದ ನಿರ್ಮೂಲನೆ ಮಾಡಬಹುದು ಎಂದರು.
ನಿಮ್ಮ ನಡುವೆ ಮಾದಕ ವ್ಯಸನಿಗಳಿದ್ದರೆ ಮಾಹಿತಿ ನೀಡಿ. ಅವರ ಜೀವನ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಅಧ್ಯಕ್ಷತೆಯನ್ನು ಪ್ರೊ. ಅರುಣಾ ಪಿ. ಕಾಮತ್ ವಹಿಸಿದ್ದರು.





ಹಳೆ ವಿದ್ಯಾರ್ಥಿ ಮೇಘರಾಜ್ ಎಂ.ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಜ್ಯೋತಿ, ಪ್ರವೀಣ್ ಡಿ, ವಿದ್ಯಾರ್ಥಿ ನಾಯಕರಾದ ಭವಿಷ್ ಕೆ. ಶೆಟ್ಟಿ, ವರ್ಷಿತಾ ಆಳ್ವಾ, ಕಾಲೇಜಿನ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು