10:23 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ನಾಯಕನಲ್ಲಿ ನಾಯಕತ್ವ ಗುಣ ಇರಬೇಕು; ಎನ್ನೆಸ್ಸೆಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳಿಸುತ್ತದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ

21/09/2023, 21:45

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಮ್ಮ ನಡುವೆ ಅನೇಕ ಲೀಡರ್ ಗಳು ಇದ್ದಾರೆ. ಆದರೆ ನಾಯಕತ್ವ ಗುಣ ಇರುವುದಿಲ್ಲ. ನಾಯಕನಾದ ವ್ಯಕ್ತಿಯಲ್ಲಿ ನಾಯಕತ್ವ ಗುಣ ಇರಬೇಕು. ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವವನ್ನು ಬೆಳೆಸುತ್ತದೆ ಎಂದು ಮಾಜಿ ಸೈನಿಕ,ರಾಜಕೀಯ ನಾಯಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಅವರು ನಗರದ ಎಸ್ ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.



ಮುಖ್ಯ ಅತಿಥಿ ಮಂಗಳೂರು ನಗರ ಪೊಲೀಸ್ ಡಿಸಿಪಿ ದಿನೇಶ್ ಕುಮಾರ್ ಅವರು ಮಾತನಾಡಿ, ದುಶ್ಚಟಗಳಿಂದ ದೂರವಿರಿ. ನಿಮ್ಮ ಅಮೂಲ್ಯ ಕಾಲೇಜು ಜೀವನ ಹಾಳು ಮಾಡಿಕೊಳ್ಳಬೇಡಿ,ಮಾದಕ ವ್ಯಸನವನ್ನು ಮಂಗಳೂರು ನಗರ ದಿಂದ ತೊಡೆದು ಹಾಕಬೇಕು. ಮಂಗಳೂರನ್ನು ಮಾದಕ ವ್ಯಸನ ಮುಕ್ತ ಮಾಡಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಆದರೆ ನೀವು ಕೈ ಜೋಡಿಸಿದಾಗ ಮಾತ್ರ ಡ್ರಗ್ಸ್ ನ್ನು ಮಂಗಳೂರು ನಗರದಿಂದ ನಿರ್ಮೂಲನೆ ಮಾಡಬಹುದು ಎಂದರು.
ನಿಮ್ಮ ನಡುವೆ ಮಾದಕ ವ್ಯಸನಿಗಳಿದ್ದರೆ ಮಾಹಿತಿ ನೀಡಿ. ಅವರ ಜೀವನ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಅಧ್ಯಕ್ಷತೆಯನ್ನು ಪ್ರೊ. ಅರುಣಾ ಪಿ. ಕಾಮತ್ ವಹಿಸಿದ್ದರು.





ಹಳೆ ವಿದ್ಯಾರ್ಥಿ ಮೇಘರಾಜ್ ಎಂ.ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಜ್ಯೋತಿ, ಪ್ರವೀಣ್ ಡಿ, ವಿದ್ಯಾರ್ಥಿ ನಾಯಕರಾದ ಭವಿಷ್ ಕೆ. ಶೆಟ್ಟಿ, ವರ್ಷಿತಾ ಆಳ್ವಾ, ಕಾಲೇಜಿನ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು