1:13 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಅಕ್ರಮ ಭೂಕಬಳಿಕೆ ತೆರವುಗೊಳಿಸದ ಕಂದಾಯ ಇಲಾಖೆ: ಬಾಳೂರು ಗ್ರಾಮಸ್ಥರಿಂದ ಅನಿರ್ಧಿಷ್ಟ ಪ್ರತಿಭಟನೆ

22/09/2023, 20:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಾಳೂರು ಗ್ರಾ.ಪಂ.ವ್ಯಾಪ್ತಿಯ ದರ್ಬಾರ್ ಪೇಟೆಯಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು 22 ಗುಂಟೆ ಜಾಗ ಮಂಜೂರಾಗಿದ್ದರೂ ಖಾಸಗಿ ವ್ಯಕ್ತಿಯೋರ್ವರು ಈ ಜಾಗವನ್ನು ಆಕ್ರಮಿಸಿರುವುದರಿಂದ ಅಂಗನವಾಡಿ ಕಟ್ಟಡ ಕಟ್ಟಲು ಬೇಲಿ ಹಾಕಿರುವ ಹಿನ್ನಲೆಯಲ್ಲಿ ಸಾಧ್ಯವಾಗುತ್ತಿಲ್ಲ. ಕಂದಾಯ ಅಧಿಕಾರಿಗಳು ಈ ಅಕ್ರಮ ಜಾಗವನ್ನು ತೆರವುಗೊಳಿಸಿಲ್ಲ ಎಂದು ವಿರೋಧಿಸಿ ಬಾಳೂರಿನಲ್ಲಿ ಗ್ರಾಮಸ್ಥರು ಅನಿರ್ದಿಷ್ಟ ಅವಧಿ ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಬಾಳೂರು ಗ್ರಾ.ಪಂ.ಅಧ್ಯಕ್ಷ ಬಿ.ಬಿ.ಮಂಜುನಾಥ್ ಮಾತನಾಡಿ ‘ಅಂಗನವಾಡಿ ಕಟ್ಟಡ ಕಟ್ಟಲು ಹಣ ಮಂಜೂರಾಗಿದೆ.ಆದರೆ ಈ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಒತ್ತುವರಿ ಮಾಡಿದ್ದು ಅದನ್ನು ಬಿಡಿಸಿ ಕೊಡಲು ತಾಲ್ಲೂಕು ಆಡಳಿತ ಮೀನಮೇಷ ಎಣಿಸುತ್ತಿದೆ. ಜಾಗ ಸಿಗುವವರೆಗೂ ನಿರಂತರ ಪ್ರತಿಭಟನೆ ಮಾಡುತ್ತೇವೆ. ಗ್ರಾಮಸ್ಥರೊಂದಿಗೆ ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಕಂದಾಯ ಅಧಿಕಾರಿಗಳು ಶೀಘ್ರವೇ ಜಾಗ ತೆರವುಗೊಳಿಸಿ ಅಂಗನವಾಡಿ ಕಟ್ಟಡ ಕಟ್ಟಲು ಸ್ಪಂದಿಸಬೇಕು. ಇಲ್ಲವಾದರೆ ಬೇಡಿಕೆ ಈಡೇರುವವರೆಗೂ ನಿರಂತರ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೀತಾ, ಸದಸ್ಯರಾದ ಮನೋಜ್ , ಜಯಶ್ರೀ ಪ್ರಕಾಶ್ ಗ್ರಾಮಸ್ಥರಾದ ರಘುಪತಿ, ಜಗದೀಶ್, ಪ್ರಭಾಕರ್, ಸಂದೀಪ್, ಮದನ್, ರಮೇಶ್ ,ಅವಿನಾಶ್, ಕೇಶವ, ವೆಂಕಟೇಶ್ , ಪ್ರಮೀಳಾ, ಜ್ಯೋತಿ,ನಳಿನಿ ಹಾಗೂ ಊರಿನ ಎಲ್ಲ ಪ್ರಮುಖರು,ಮಹಿಳಾ ಸಂಘದ ಎಲ್ಲಾ ಸದಸ್ಯರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು