4:08 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಅಕ್ರಮ ಭೂಕಬಳಿಕೆ ತೆರವುಗೊಳಿಸದ ಕಂದಾಯ ಇಲಾಖೆ: ಬಾಳೂರು ಗ್ರಾಮಸ್ಥರಿಂದ ಅನಿರ್ಧಿಷ್ಟ ಪ್ರತಿಭಟನೆ

22/09/2023, 20:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಾಳೂರು ಗ್ರಾ.ಪಂ.ವ್ಯಾಪ್ತಿಯ ದರ್ಬಾರ್ ಪೇಟೆಯಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು 22 ಗುಂಟೆ ಜಾಗ ಮಂಜೂರಾಗಿದ್ದರೂ ಖಾಸಗಿ ವ್ಯಕ್ತಿಯೋರ್ವರು ಈ ಜಾಗವನ್ನು ಆಕ್ರಮಿಸಿರುವುದರಿಂದ ಅಂಗನವಾಡಿ ಕಟ್ಟಡ ಕಟ್ಟಲು ಬೇಲಿ ಹಾಕಿರುವ ಹಿನ್ನಲೆಯಲ್ಲಿ ಸಾಧ್ಯವಾಗುತ್ತಿಲ್ಲ. ಕಂದಾಯ ಅಧಿಕಾರಿಗಳು ಈ ಅಕ್ರಮ ಜಾಗವನ್ನು ತೆರವುಗೊಳಿಸಿಲ್ಲ ಎಂದು ವಿರೋಧಿಸಿ ಬಾಳೂರಿನಲ್ಲಿ ಗ್ರಾಮಸ್ಥರು ಅನಿರ್ದಿಷ್ಟ ಅವಧಿ ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಬಾಳೂರು ಗ್ರಾ.ಪಂ.ಅಧ್ಯಕ್ಷ ಬಿ.ಬಿ.ಮಂಜುನಾಥ್ ಮಾತನಾಡಿ ‘ಅಂಗನವಾಡಿ ಕಟ್ಟಡ ಕಟ್ಟಲು ಹಣ ಮಂಜೂರಾಗಿದೆ.ಆದರೆ ಈ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಒತ್ತುವರಿ ಮಾಡಿದ್ದು ಅದನ್ನು ಬಿಡಿಸಿ ಕೊಡಲು ತಾಲ್ಲೂಕು ಆಡಳಿತ ಮೀನಮೇಷ ಎಣಿಸುತ್ತಿದೆ. ಜಾಗ ಸಿಗುವವರೆಗೂ ನಿರಂತರ ಪ್ರತಿಭಟನೆ ಮಾಡುತ್ತೇವೆ. ಗ್ರಾಮಸ್ಥರೊಂದಿಗೆ ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಕಂದಾಯ ಅಧಿಕಾರಿಗಳು ಶೀಘ್ರವೇ ಜಾಗ ತೆರವುಗೊಳಿಸಿ ಅಂಗನವಾಡಿ ಕಟ್ಟಡ ಕಟ್ಟಲು ಸ್ಪಂದಿಸಬೇಕು. ಇಲ್ಲವಾದರೆ ಬೇಡಿಕೆ ಈಡೇರುವವರೆಗೂ ನಿರಂತರ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೀತಾ, ಸದಸ್ಯರಾದ ಮನೋಜ್ , ಜಯಶ್ರೀ ಪ್ರಕಾಶ್ ಗ್ರಾಮಸ್ಥರಾದ ರಘುಪತಿ, ಜಗದೀಶ್, ಪ್ರಭಾಕರ್, ಸಂದೀಪ್, ಮದನ್, ರಮೇಶ್ ,ಅವಿನಾಶ್, ಕೇಶವ, ವೆಂಕಟೇಶ್ , ಪ್ರಮೀಳಾ, ಜ್ಯೋತಿ,ನಳಿನಿ ಹಾಗೂ ಊರಿನ ಎಲ್ಲ ಪ್ರಮುಖರು,ಮಹಿಳಾ ಸಂಘದ ಎಲ್ಲಾ ಸದಸ್ಯರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು