6:17 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ಕಳವಾದ ಟೆಂಪೋ ಟ್ರಾವಲರ್ ಬೆಳಗಾವಿಯಲ್ಲಿ ವಶಕ್ಕೆ: ಉರ್ವ ಪೊಲೀಸರಿಂದ 3 ಮಂದಿ ಬಂಧನ

23/09/2023, 12:55

ಮಂಗಳೂರು(reporterkarnataka.com): ನಗರದ ಕುಂಟಿಕಾನ ಫ್ಲೈ ಓವರ್ ಬಳಿ ಪಾರ್ಕ್ ಮಾಡಿದ್ದ ಟೆಂಪೋ ಟ್ರಾವೆಲರ್ ( KA 19 AC 8179) ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಳಗಾವಿಯಲ್ಲಿ ಮೂವರನ್ನು ಬಂಧಿಸಿದ್ದು, ವಾಹನ ವಶಪಡಿಸಿಕೊಂಡಿದ್ದಾರೆ.
ಸೆ.14ರಂದು ರಾತ್ರಿ 8:30 ಸಮಯಕ್ಕೆ ವಾಹನವನ್ನು ಪಾರ್ಕ್ ಮಾಡಿದ್ದು ಸೆ. 15ರಂದು ಮಧ್ಯಾಹ್ನ 12: 30 ಸಮಯಕ್ಕೆ ವಾಹನ ಕಳುವಾದ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ವಾಹನ ಕಳವು ಪ್ರಕರಣದ ಆರೋಪಿಗಳ ಮತ್ತು ವಾಹನದ ಪತ್ತೆಗಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಆದೇಶದಂತೆ ಹಾಗೂ ಡಿಸಿಪಿಗಳಾ್ ಸಿದ್ದಾರ್ಥ್ ಗೋಯಲ್ ಮತ್ತು ದಿನೇಶ್ ಕುಮಾರ್ ಅವರ ಮಾರ್ಗದರ್ಶನದಂತೆ ಎಸಿಪಿ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಠಾಣಾ ನಿರೀಕ್ಷಕರಾದ ಭಾರತಿ ಜಿ. ಅವರ ಸಾರಥ್ಯದಲ್ಲಿ ವಿಶೇಷ ತಂಡವನ್ನು ರಚಿಸಿ ಉಪ ನಿರೀಕ್ಷಕರವಾದ ಹರೀಶ್ ಹೆಚ್ ವಿ, ಎಎಸ್ಐ ವಿನಯ್ ಕುಮಾರ್ ಎ ಎಸ್ ಐ ಉಲ್ಲಾಸ್ ಮಹಾಲೆ ಪೊಲೀಸ್ ಸಿಬ್ಬಂದಿಗಳಾದ ಗಿರೀಶ್ , ಭಾಸ್ಕರ್ , ಅಭಿಷೇಕ್ , ಪ್ರಜ್ವಲ್ ಅವರುಗಳು ಬೆಳಗಾವಿಯಲ್ಲಿ ಆರೋಪಿಗಳಾದ ಅರೀಫ್ ಉಲ್ಲಾಖಾನ್ ಯಾನೆ ಅರೀಫ್, ಅಮಿತ್ ಬಾಹುಬಲಿ ಪಂಚೋಡಿ ಯಾನೆ ಬೇಬಿ, ಸುರೇಂದ್ರ ಕುಮಾರ್ ಇವರುಗಳನ್ನು ವಶಕ್ಕೆ ಪಡೆದು ಕಳುವಾದ ಸುಮಾರು 15 ಲಕ್ಷ ಮೌಲ್ಯದ ಟೆಂಪೋ ಟ್ರಾವೆಲ್ಲೆರ್ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು