2:35 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ಕಳವಾದ ಟೆಂಪೋ ಟ್ರಾವಲರ್ ಬೆಳಗಾವಿಯಲ್ಲಿ ವಶಕ್ಕೆ: ಉರ್ವ ಪೊಲೀಸರಿಂದ 3 ಮಂದಿ ಬಂಧನ

23/09/2023, 12:55

ಮಂಗಳೂರು(reporterkarnataka.com): ನಗರದ ಕುಂಟಿಕಾನ ಫ್ಲೈ ಓವರ್ ಬಳಿ ಪಾರ್ಕ್ ಮಾಡಿದ್ದ ಟೆಂಪೋ ಟ್ರಾವೆಲರ್ ( KA 19 AC 8179) ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಳಗಾವಿಯಲ್ಲಿ ಮೂವರನ್ನು ಬಂಧಿಸಿದ್ದು, ವಾಹನ ವಶಪಡಿಸಿಕೊಂಡಿದ್ದಾರೆ.
ಸೆ.14ರಂದು ರಾತ್ರಿ 8:30 ಸಮಯಕ್ಕೆ ವಾಹನವನ್ನು ಪಾರ್ಕ್ ಮಾಡಿದ್ದು ಸೆ. 15ರಂದು ಮಧ್ಯಾಹ್ನ 12: 30 ಸಮಯಕ್ಕೆ ವಾಹನ ಕಳುವಾದ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ವಾಹನ ಕಳವು ಪ್ರಕರಣದ ಆರೋಪಿಗಳ ಮತ್ತು ವಾಹನದ ಪತ್ತೆಗಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಆದೇಶದಂತೆ ಹಾಗೂ ಡಿಸಿಪಿಗಳಾ್ ಸಿದ್ದಾರ್ಥ್ ಗೋಯಲ್ ಮತ್ತು ದಿನೇಶ್ ಕುಮಾರ್ ಅವರ ಮಾರ್ಗದರ್ಶನದಂತೆ ಎಸಿಪಿ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಠಾಣಾ ನಿರೀಕ್ಷಕರಾದ ಭಾರತಿ ಜಿ. ಅವರ ಸಾರಥ್ಯದಲ್ಲಿ ವಿಶೇಷ ತಂಡವನ್ನು ರಚಿಸಿ ಉಪ ನಿರೀಕ್ಷಕರವಾದ ಹರೀಶ್ ಹೆಚ್ ವಿ, ಎಎಸ್ಐ ವಿನಯ್ ಕುಮಾರ್ ಎ ಎಸ್ ಐ ಉಲ್ಲಾಸ್ ಮಹಾಲೆ ಪೊಲೀಸ್ ಸಿಬ್ಬಂದಿಗಳಾದ ಗಿರೀಶ್ , ಭಾಸ್ಕರ್ , ಅಭಿಷೇಕ್ , ಪ್ರಜ್ವಲ್ ಅವರುಗಳು ಬೆಳಗಾವಿಯಲ್ಲಿ ಆರೋಪಿಗಳಾದ ಅರೀಫ್ ಉಲ್ಲಾಖಾನ್ ಯಾನೆ ಅರೀಫ್, ಅಮಿತ್ ಬಾಹುಬಲಿ ಪಂಚೋಡಿ ಯಾನೆ ಬೇಬಿ, ಸುರೇಂದ್ರ ಕುಮಾರ್ ಇವರುಗಳನ್ನು ವಶಕ್ಕೆ ಪಡೆದು ಕಳುವಾದ ಸುಮಾರು 15 ಲಕ್ಷ ಮೌಲ್ಯದ ಟೆಂಪೋ ಟ್ರಾವೆಲ್ಲೆರ್ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು