6:02 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ಕಳವಾದ ಟೆಂಪೋ ಟ್ರಾವಲರ್ ಬೆಳಗಾವಿಯಲ್ಲಿ ವಶಕ್ಕೆ: ಉರ್ವ ಪೊಲೀಸರಿಂದ 3 ಮಂದಿ ಬಂಧನ

23/09/2023, 12:55

ಮಂಗಳೂರು(reporterkarnataka.com): ನಗರದ ಕುಂಟಿಕಾನ ಫ್ಲೈ ಓವರ್ ಬಳಿ ಪಾರ್ಕ್ ಮಾಡಿದ್ದ ಟೆಂಪೋ ಟ್ರಾವೆಲರ್ ( KA 19 AC 8179) ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಳಗಾವಿಯಲ್ಲಿ ಮೂವರನ್ನು ಬಂಧಿಸಿದ್ದು, ವಾಹನ ವಶಪಡಿಸಿಕೊಂಡಿದ್ದಾರೆ.
ಸೆ.14ರಂದು ರಾತ್ರಿ 8:30 ಸಮಯಕ್ಕೆ ವಾಹನವನ್ನು ಪಾರ್ಕ್ ಮಾಡಿದ್ದು ಸೆ. 15ರಂದು ಮಧ್ಯಾಹ್ನ 12: 30 ಸಮಯಕ್ಕೆ ವಾಹನ ಕಳುವಾದ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ವಾಹನ ಕಳವು ಪ್ರಕರಣದ ಆರೋಪಿಗಳ ಮತ್ತು ವಾಹನದ ಪತ್ತೆಗಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಆದೇಶದಂತೆ ಹಾಗೂ ಡಿಸಿಪಿಗಳಾ್ ಸಿದ್ದಾರ್ಥ್ ಗೋಯಲ್ ಮತ್ತು ದಿನೇಶ್ ಕುಮಾರ್ ಅವರ ಮಾರ್ಗದರ್ಶನದಂತೆ ಎಸಿಪಿ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಠಾಣಾ ನಿರೀಕ್ಷಕರಾದ ಭಾರತಿ ಜಿ. ಅವರ ಸಾರಥ್ಯದಲ್ಲಿ ವಿಶೇಷ ತಂಡವನ್ನು ರಚಿಸಿ ಉಪ ನಿರೀಕ್ಷಕರವಾದ ಹರೀಶ್ ಹೆಚ್ ವಿ, ಎಎಸ್ಐ ವಿನಯ್ ಕುಮಾರ್ ಎ ಎಸ್ ಐ ಉಲ್ಲಾಸ್ ಮಹಾಲೆ ಪೊಲೀಸ್ ಸಿಬ್ಬಂದಿಗಳಾದ ಗಿರೀಶ್ , ಭಾಸ್ಕರ್ , ಅಭಿಷೇಕ್ , ಪ್ರಜ್ವಲ್ ಅವರುಗಳು ಬೆಳಗಾವಿಯಲ್ಲಿ ಆರೋಪಿಗಳಾದ ಅರೀಫ್ ಉಲ್ಲಾಖಾನ್ ಯಾನೆ ಅರೀಫ್, ಅಮಿತ್ ಬಾಹುಬಲಿ ಪಂಚೋಡಿ ಯಾನೆ ಬೇಬಿ, ಸುರೇಂದ್ರ ಕುಮಾರ್ ಇವರುಗಳನ್ನು ವಶಕ್ಕೆ ಪಡೆದು ಕಳುವಾದ ಸುಮಾರು 15 ಲಕ್ಷ ಮೌಲ್ಯದ ಟೆಂಪೋ ಟ್ರಾವೆಲ್ಲೆರ್ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು