2:01 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬಂಟ್ವಾಳ ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ ಉದ್ಘಾಟನೆ

23/09/2023, 20:03

ಬಂಟ್ವಾಳ(reporterkarnataka.com): ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ 2023- 24ರ ಉದ್ಘಾಟನಾ ಸಮಾರಂಭ ಜರುಗಿತು.


ಮುಖ್ಯ ಅತಿಥಿಗಳಾದ ಡಾ. ಪ್ರಕಾಶ್ ಚಂದ್ರ ಬಿ. ಮಾತಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ನಾಯಕತ್ವದ ಗುಣವಿದೆ. ನಾವೆಲ್ಲರೂ ನಮ್ಮ ಜೀವನಕ್ಕೆ ನಾಯಕರು, ವಿದ್ಯಾರ್ಥಿಗಳಿಗೆ ಸಾಧಿಸಬೇಕೆಂಬ ಛಲ ಇದ್ದರೆ ಮಾತ್ರ ಭವಿಷ್ಯದಲ್ಲಿ ಉತ್ತಮ ನಾಗರೀಕರಾಗಿ ಮುಂದುವರಿಯಲು ಸಾಧ್ಯ ಎಂದರು.



ಅಧ್ಯಕ್ಷತೆಯನ್ನು ವಹಿಸಿದ್ದ ಲತಾ ಫೆರ್ನಾಂಡಿಸ್ ಎ. ಸಿ., (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜ್ ಮೊಡಂಕಾಪು) ವಿದ್ಯಾರ್ಥಿ ಪರಿಷತ್ತಿಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಹಾರೈಸಿ, ಮುಂದಿನ ಎಲ್ಲಾ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲು ಬೇಕಾದ ಮಾರ್ಗದರ್ಶನ ನೀಡಿದರು. ಅದೇ ರೀತಿ ಪ್ರಾಂಶುಪಾಲರು ಕಾಲೇಜು ಬಾವುಟವನ್ನು ವಿದ್ಯಾರ್ಥಿ ಪರಿಷತ್ತಿನ ನಾಯಕಿ ಹಾಗೂ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ವಿದ್ಯಾರ್ಥಿ ಪರಿಷತ್ತಿನ ಎಲ್ಲಾ ನಾಯಕರು ಪ್ರಾಂಶುಪಾಲರ ನೇತೃತ್ವದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿ ಡಾ. ಪ್ರಕಾಶ್ ಚಂದ್ರ ಬಿ., (ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾಮಜೆ ಬಂಟ್ವಾಳ), ಲತಾ ಫೆರ್ನಾಂಡಿಸ್ ಎ. ಸಿ.,( ಪ್ರಾಂಶುಪಾಲರು, ಕಾರ್ಮೆಲ್ ಕಾಲೇಜು ಮೊಡಂಕಾಪು), ಜೋಯಲ್ ಮಸ್ಕರೇನಸ್ (ವಾಣಿಜ್ಯ ಉಪನ್ಯಾಸಕರು), ಅಲ್ವಿಶ ಫ್ರಾಂಕ್ (ನಾಯಕಿ ವಿದ್ಯಾರ್ಥಿ ಪರಿಷತ್) ಹಾಗೂ ರಮ್ಜೀನಾ(ಕಾರ್ಯದರ್ಶಿ ವಿದ್ಯಾರ್ಥಿ ಪರಿಷತ್) ಉಪಸ್ಥಿತರಿದ್ದರು.
ಅಲ್ವಿಶ ವಾರ್ಷಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ಆಸಿಯ ಕಾರ್ಯಕ್ರಮ ನಿರೂಪಿಸಿದರು, ರಮ್ಜೀನಾ ಸ್ವಾಗತಿಸಿದರು, ಮುಸ್ತಾಫ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು