3:14 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಪರಪ್ಪನ ಅಗ್ರಹಾರದಲ್ಲಿ ಒಂದು ರಾತ್ರಿ ಕಳೆದ ಚೈತ್ರಾ ಕುಂದಾಪುರ: ಇಂದು ಖೈದಿ ಸಂಖ್ಯೆ ನೀಡಲಿದ್ದಾರೆ ಜೈಲ್ ಸಿಬ್ಬಂದಿ

24/09/2023, 11:24

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.ಕಂ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಬಂಧಿತಳಾದ ಚೈತ್ರಾ ಕುಂದಾಪುರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾರೆ. ಇಂದು ಆಕೆಗೆ ಖೈದಿ ಸಂಖ್ಯೆ ಸಿಗಲಿದೆ.
ಚೈತ್ರಾ ಕುಂದಾಪುರ ಅವರ ಸಿಸಿಬಿ ಪೊಲೀಸ್ ಕಸ್ಟಡಿ ಅವಧಿ ನಿನ್ನೆಗೆ ಮುಕ್ತಾಯವಾಗಿತ್ತು. ನಿನ್ನೆ ಸಿಸಿಬಿ ಪೊಲೀಸರು ಆಕೆಯನ್ನು ಕೋರ್ಟ್ ಮುಂದೆ ಹಾಜರುಪಡಿಸಿದಾಗ, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನಂತರ ಅವಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದು ತರಲಾಯಿತು.
ನಿನ್ನೆ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ್ದ ಚೈತ್ರಾ ಕುಂದಾಪುರ ಅವಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಕಾಗಿದ್ದಳು.
ಶನಿವಾರ ಸಂಜೆ ಸುಮಾರು 6 ಗಂಟೆಗೆ ಚೈತ್ರಾ ಮತ್ತು ಆಕೆಯ ಟೀಮನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದು ತರಲಾಯಿತು. ಇಲ್ಲಿನ ಹೊಸ ಜೈಲಿನ ಪ್ರತ್ಯೇಕ ಕೊಠಡಿಯಲ್ಲಿ ಚೈತ್ರಾಳನ್ನು ಒಂಟಿಯಾಗಿ ಇರಿಸಲಾಗಿದೆ.
ಚೈತ್ರಾ ಶನಿವಾರ ರಾತ್ರಿ ಜೈಲು ಸಿಬ್ಬಂದಿ ನೀಡಿದ ಚಪಾತಿ, ಅನ್ನ-ಸಾಂಬರ್ ಸೇವಿಸಿದ್ದಾಳೆ.ಇಂದು ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವನೆ ಮಾಡಿದ್ದಾಳೆ. ಹಾಗೆ ಇಂದು ಆಕೆಗೆ ಜೈಲ್ ಸಿಬ್ಬಂದಿಗಳು ಯುಟಿಪಿ(ಅಂಡರ್ ಟ್ರೈಯಲ್ ಪ್ರಿಸಿನರ್) ಸಂಖ್ಯೆ ನೀಡಿದ್ದಾರೆ.
ಒಟ್ಟು 10 ದಿನಗಳ ಕಾಲ ಹೊಸ ಬಂಧಿಖಾನೆಯಲ್ಲೇ ಚೈತ್ರಾ ಉಳಿಯಲಿದ್ದಾಳೆ. ಬಳಿಕ ಹಳೆಯ ಜೈಲಿಗೆ ಚೈತ್ರಾಳನ್ನು ಜೈಲು ಸಿಬ್ಬಂದಿ ಶಿಫ್ಟ್ ಮಾಡಲಿದ್ದಾರೆ.
ಪ್ರಕರಣದ ಇತರ ಆರೋಪಿಗಳಾದ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಪ್ರತ್ಯೇಕ‌ ಪುರುಷರ ಸೆಲ್​ನಲ್ಲಿ ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು