10:46 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಪರಪ್ಪನ ಅಗ್ರಹಾರದಲ್ಲಿ ಒಂದು ರಾತ್ರಿ ಕಳೆದ ಚೈತ್ರಾ ಕುಂದಾಪುರ: ಇಂದು ಖೈದಿ ಸಂಖ್ಯೆ ನೀಡಲಿದ್ದಾರೆ ಜೈಲ್ ಸಿಬ್ಬಂದಿ

24/09/2023, 11:24

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.ಕಂ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಬಂಧಿತಳಾದ ಚೈತ್ರಾ ಕುಂದಾಪುರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾರೆ. ಇಂದು ಆಕೆಗೆ ಖೈದಿ ಸಂಖ್ಯೆ ಸಿಗಲಿದೆ.
ಚೈತ್ರಾ ಕುಂದಾಪುರ ಅವರ ಸಿಸಿಬಿ ಪೊಲೀಸ್ ಕಸ್ಟಡಿ ಅವಧಿ ನಿನ್ನೆಗೆ ಮುಕ್ತಾಯವಾಗಿತ್ತು. ನಿನ್ನೆ ಸಿಸಿಬಿ ಪೊಲೀಸರು ಆಕೆಯನ್ನು ಕೋರ್ಟ್ ಮುಂದೆ ಹಾಜರುಪಡಿಸಿದಾಗ, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನಂತರ ಅವಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದು ತರಲಾಯಿತು.
ನಿನ್ನೆ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ್ದ ಚೈತ್ರಾ ಕುಂದಾಪುರ ಅವಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಕಾಗಿದ್ದಳು.
ಶನಿವಾರ ಸಂಜೆ ಸುಮಾರು 6 ಗಂಟೆಗೆ ಚೈತ್ರಾ ಮತ್ತು ಆಕೆಯ ಟೀಮನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದು ತರಲಾಯಿತು. ಇಲ್ಲಿನ ಹೊಸ ಜೈಲಿನ ಪ್ರತ್ಯೇಕ ಕೊಠಡಿಯಲ್ಲಿ ಚೈತ್ರಾಳನ್ನು ಒಂಟಿಯಾಗಿ ಇರಿಸಲಾಗಿದೆ.
ಚೈತ್ರಾ ಶನಿವಾರ ರಾತ್ರಿ ಜೈಲು ಸಿಬ್ಬಂದಿ ನೀಡಿದ ಚಪಾತಿ, ಅನ್ನ-ಸಾಂಬರ್ ಸೇವಿಸಿದ್ದಾಳೆ.ಇಂದು ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವನೆ ಮಾಡಿದ್ದಾಳೆ. ಹಾಗೆ ಇಂದು ಆಕೆಗೆ ಜೈಲ್ ಸಿಬ್ಬಂದಿಗಳು ಯುಟಿಪಿ(ಅಂಡರ್ ಟ್ರೈಯಲ್ ಪ್ರಿಸಿನರ್) ಸಂಖ್ಯೆ ನೀಡಿದ್ದಾರೆ.
ಒಟ್ಟು 10 ದಿನಗಳ ಕಾಲ ಹೊಸ ಬಂಧಿಖಾನೆಯಲ್ಲೇ ಚೈತ್ರಾ ಉಳಿಯಲಿದ್ದಾಳೆ. ಬಳಿಕ ಹಳೆಯ ಜೈಲಿಗೆ ಚೈತ್ರಾಳನ್ನು ಜೈಲು ಸಿಬ್ಬಂದಿ ಶಿಫ್ಟ್ ಮಾಡಲಿದ್ದಾರೆ.
ಪ್ರಕರಣದ ಇತರ ಆರೋಪಿಗಳಾದ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಪ್ರತ್ಯೇಕ‌ ಪುರುಷರ ಸೆಲ್​ನಲ್ಲಿ ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು