12:57 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ದೇಶದ ರಾಜಕೀಯ ಚಿತ್ರಣ ಬದಲಾಗಲು ಮಂಗಳೂರಿನ ಫಲಿತಾಂಶ ನಾಂದಿ ಹಾಡಲಿದೆ: ಸಚಿವ ಮಧು ಬಂಗಾರಪ್ಪ

24/09/2023, 18:40

ಮಂಗಳೂರು(reporterKarnataka.com): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸನ್ನು ಕೈಹಿಡಿಯಲುದ್ದಾರೆ. ಮತೀಯ ವಾದ, ಕೋಮುವಾದದ ಭಾವನಾತ್ಮಕ ವಿಚಾರಗಳಿಂದ ಜನ ವಿಮುಖರಾಗುತ್ತಿದ್ದಾರೆ ಎಂದು ಶಿಕ್ಷಣ ಸಚಿವ, ಮಂಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಉಸ್ತುವಾರಿ ಮಧು ಬಂಗಾರಪ್ಪ ಹೇಳಿದರು.


ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಯ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಕರೆದಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಕರ್ನಾಟಕ ಕಾಂಗ್ರೆಸ್ ಸರಕಾರ ಕೊಟ್ಟಿರುವ ಗ್ಯಾರೆಂಟಿಗಳು ಜನರ ಬದುಕನ್ನು ಬೆಳಗಿಸಿವೆ. ಇದರ ಪ್ರಭಾವ ಮುಂದಿನ ಚುನಾವಣೆಯಲ್ಲಿ ಪ್ರತಿಬಿಂಬಿತವಾಗಲಿದೆ ಎಂದು ಅವರು ನುಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಕಾರ್ಯಕರ್ತರ, ಸಂಘ ಸಂಸ್ಥೆಗಳ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸರ್ವೆ ನಡೆಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ಅವರು ಸಭೆಯ ಅಧ್ಯಕ್ಷ ವಹಿಸಿದ್ದರು.
ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್ ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಬಿ. ಇಬ್ರಾಹಿಂ, ಅಶೋಕ್ ಕುಮಾರ್ ರೈ, ಜೆ. ಆರ್. ಲೋಬೊ, ಮಿಥುನ್ ರೈ, ಇಬ್ರಾಹಿಂ ಕೊಡಿಜಾಲ್, ಶಶಿದರ್ ಹೆಗ್ಡೆ, ಲುಕ್ಮನ್ ಬಂಟ್ವಾಳ್, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಕೃಪಾ ಆಳ್ವಾ, ಅಶ್ವಿನ್ ಕುಮಾರ್ ರೈ,ಇನಾಯತ್ ಅಲಿ, ಜಿ ಕೃಷ್ಣಪ್ಪ, ಬ್ಲಾಕ್ ಅಧ್ಯಕ್ಷರುಗಳು , ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ನಾಯಕರು, ಮನಪಾ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು