7:23 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

Maravoor | ಸೇತುವೆ ಮೇಲೆತ್ತುವ ಕಾರ್ಯ ಬಹುತೇಕ ಪೂರ್ಣ : ಜುಲೈ 30 ರಿಂದ ಮರವೂರು ಸೇತುವೆ ಓಪನ್ ?

27/07/2021, 15:06

ಮಂಗಳೂರು (ReporterKarnataka.com)

ಮಂಗಳೂರಿನ ಪ್ರಮುಖ ಸಂಪರ್ಕ ಕೊಂಡಿಯಾದ ಮರವೂರು ಸೇತುವೆ ಕುಸಿದ್ದು ಬಿದ್ದಿದ್ದು ಸಂಚಾರಕ್ಕೆ ಬಹಳಷ್ಟು ತೊಂದರೆ ಉಂಟಾಗಿತ್ತು. ಈಗ ಸೇತುವೆಯನ್ನು ಮತ್ತೆ ಎತ್ತರಿಸುವ ಕೆಲಸ ಮಾಡಲಾಗಿದ್ದು, ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ.

ಮಂಗಳೂರಿನಿಂದ ಬಜ್ಜೆ ಏರ್ಪೋರ್ಟ್ ಮತ್ತು ಕಟೀಲು ಕಡೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ತಿಂಗಳ ಹಿಂದೆ ಕುಸಿದಿತ್ತು. ಇನ್ನೊಂದು ಹೊಸ ಸೇತುವೆ ನಿರ್ಮಾಣ ಸಂದರ್ಭದಲ್ಲಿ ನದಿಗೆ ಮಣ್ಣು ಹಾಕಿದ್ದರಿಂದ ಒಂದು ಭಾಗದಲ್ಲಿ ಮಾತ್ರ ನೀರು ರಭಸವಾಗಿ ಹರಿದ ಪರಿಣಾಮ ಅಲ್ಲಿನ ಹಳೆ ಸೇತುವೆಯ ಪಿಲ್ಲರ್ ಕುಸಿದು ನಿಂತಿತ್ತು. ಹೀಗಾಗಿ ಸೇತುವೆ ಎರಡು ಪಿಲ್ಲರ್ ಗಳ ನಡುವೆ ಒಂದೂವರೆ ಅಡಿಯಷ್ಟು ಸ್ಲಾಬ್ ಕುಸಿದಿತ್ತು.

ಇದೀಗ ಸೇತುವೆಯನ್ನು ಪರ್ಯಾಯ ವ್ಯವಸ್ಥೆಯ ಮೂಲಕ ಎತ್ತರಿಸಲಾಗಿದ್ದು, ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅನುವಾಗುವಂತೆ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡಿದ್ದು, ಜುಲೈ 30ರಿಂದ ಲಘು ವಾಹನಗಳ ಸಂಚಾರಕ್ಕೆ ಮುಕ್ತ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು