7:34 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಅರಣ್ಯ ಸಚಿವ ಈಶ್ವರ ಖಂಡ್ರೆ

24/09/2023, 19:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಸಿಗೆ ಯಾವುದೇ ನಷ್ಟವಿಲ್ಲ. ಬಿಜೆಪಿ-ಜೆಡಿಎಸ್ ಇಬ್ಬರ ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಮಾಧ್ಯಮ ಜತೆ ಮಾತನಾಡಿ,ಬಿಜೆಪಿ-ಜೆಡಿಎಸ್ ಹೊಟ್ಟೆಕಿಚ್ಚಿನಿಂದ ಕೈ-ಕೈ ಹಿಸುಕಿಕೊಳ್ತಿದ್ದಾರೆ. ಹೊಟ್ಟೆಕಿಚ್ಚಿನಿಂದ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ.ಅವರಿಗೆ ತಮ್ಮ ಅಸ್ತಿತ್ವವೇ ಹೋಗುತ್ತೆ, ಕಾಂಗ್ರೆಸ್ ಮುಂದೆ ನಾವು ಏನು ಇರಲ್ಲ ಅನ್ನಿಸಿದೆ ಎಂದು ಸಚಿವರು ನುಡಿದರು.ಅವರಿಗೆ ಯಾವುದೇ ಕೆಲಸ ಇಲ್ಲದ ಕಾರಣ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರ ಮಾತುಗಳಲ್ಲಿ ಹುರುಳಿಲ್ಲ, ಕಾಂಗ್ರೆಸ್ಸಿಗೆ ಅವರಿಂದ ನಷ್ಟವೂ ಇಲ್ಲ.ಲೋಕಸಭೆಯಲ್ಲಿ 25 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಅವರು ನುಡಿದರು.ಗ್ಯಾರಂಟಿಯಿಂದಲೇ ಕಾಂಗ್ರೆಸ್ ಪೂರ್ಣ ಬಹುಮತದ ಸರ್ಕಾರ ಬಂದಿದೆ. ಕೊಟ್ಟ ಮಾತನ್ನ ಉಳಿಸಿಕೊಂಡು ಪಾರದರ್ಶಕ ಆಡಳಿತ ನೀಡುತ್ತಿದ್ದೇವೆ. ಕಾವೇರಿ ನದಿ ನೀರು ವಿವಾದ ಕುರಿತು ಮಾತನಾಡಿದ ಅವರು, ರಾಜ್ಯದ ನೆಲ-ಜಲ ಕಾಪಾಡುವುದು ನಮ್ಮಲ್ಲೆರ ಕರ್ತವ್ಯ.ಆ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಕಾವೇರಿ ನೀರು ಬಳಕೆ ಮಾಡುವುದು.ನಮ್ಮ ರೈತರ ಅನೂಕುಲಕ್ಕಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ತಜ್ಞರು, ಹಿರಿಯರ ಜೊತೆ ನಿರಂತರ ಚರ್ಚೆ ನಡೆಯುತ್ತಿದೆ.ಸರ್ವ ಪಕ್ಷ ಸಭೆ ಕರೆದು ಕೂಡ ಚರ್ಚೆ ಮಾಡಲಾಗಿದೆ. ಕೇಂದ್ರದ ಗಮನಕ್ಕೆ ತಂದು ಸರ್ವೋಚ್ಚ ನ್ಯಾಯಲಯದಲ್ಲಿ ವಾದ ಮಂಡಿಸಲಿದ್ದೇವೆ. ನಮ್ಮ ರಾಜ್ಯಕ್ಕೆ ಆ ಭಾಗದ ರೈತರು, ಜನರಿಗೆ ಆನ್ಯಾಯವಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು