9:32 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

24/09/2023, 21:53

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ ಇತ್ತೀಚಿಗೆ ಜರುಗಿತು.
ಕಾರ್ಯಕ್ರಮವನ್ನು ಮುಖ್ಯ ಅತಿಥಿ ಬಂಟ್ವಾಳ ಎಸ್. ವಿ. ಎಸ್ . ಕಾಲೇಜಿನ ಹಿಂದಿ ಉಪನ್ಯಾಸಕಿ ಚಂದ್ರಿಕಾ ಆರ್. ರಾವ್ ಉದ್ಘಾಟಿಸಿದರು. ಅವರು ಮಾತನಾಡಿ, ಹಿಂದಿ ಭಾಷೆಯನ್ನು ಆಂಗ್ಲ ಭಾಷೆಯ ಪರ್ಯಾಯವಾಗಿ ಉಪಯೋಗಿಸಿ, ಬೆಳೆಸಬೇಕು ಎಂದರು.


ಕಬೀರದಾಸ್ ರವರ ಜನಪ್ರಿಯ ದೋಹಾಗಳನ್ನು ವಾಚಿಸಿ ಅದರ ಭಾವಾರ್ಥವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಅವರು ಹೇಳಿದರು.
ಪ್ರಾಂಶುಪಾಲೆ ಸಿಸ್ಟರ್ ಲತಾ ಫೆರ್ನಾಂಡಿಸ್, ಹಿಂದಿ ಉಪನ್ಯಾಸಕಿ ಪ್ರೀತಿ ಹಾಗೂ ಕಾರ್ಯದರ್ಶಿ ವಿದ್ಯಾರ್ಥಿನಿ ಶಾಲ್ಮ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಾದ ಅಲ್ವಿಶಾ ಮತ್ತು ಜೊಸ್ವಿಟ ಹಿಂದಿ ದಿವಸ್ ಗೀತೆಯನ್ನು ಹಾಡಿದರು. ಜ್ಯೋತಿ ಹಿಂದಿ ಭಾಷೆಯ ಮಹತ್ವವನ್ನು ಸಾರುವ ಕವಿತೆಯನ್ನು ವಾಚಿಸಿದರು. ಹಿಂದಿ ಪ್ರಬಂಧ ಹಾಗು ಪಿಕ್ & ಸ್ಪೀಚ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಬಹುಮಾನವನ್ನು ವಿತರಿಸಿದರು. ಫಾತಿಮತ್ ನಜ್ಮಿಯ ಕಾರ್ಯಕ್ರಮವನ್ನು ವಿದ್ಯಾರ್ಥಿ ಗಳಾದ ಫಾತಿಮತ್ ನಜ್ಮಿಯ
ನಿರೂಪಿಸಿ, ರಾಮ್ಝೀನ ಸ್ವಾಗತಿಸಿ, ಶಾಲ್ಮ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು