1:19 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕಾರ್ಕಳ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾಗಿ ಯಶೋದಾ ಶೆಟ್ಟಿ ಪುನರಾಯ್ಕೆ

26/09/2023, 16:20

ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ದ ಮಹಾಸಭೆಯು ಒಕ್ಕೂಟದ ಸಭಾಂಗಣದಲ್ಲಿ ಯಶೋಧ ಶೆಟ್ಟಿ
ಅಜೆಕಾರು ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಒಕ್ಕೂಟದ ಕಾರ್ಯದರ್ಶಿಯವರಾದ ವಸಂತಿ ಪಿ. ಸುವರ್ಣ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. ಒಕ್ಕೂಟಕ್ಕೆ ನೂತನ ಕಾರ್ಯಕಾರಿ ಸಮಿತಿಯನ್ನು ರಚನೆ ಮಾಡಲಾಗಿದ್ದು,
ಯಶೋಧ ಶೆಟ್ಟಿ ಅಜೆಕಾರ್ ಅವರು ಅಧ್ಯಕ್ಷರಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು .
ಸಾವಿತ್ರಿ ಮನೋಹರ್ ಅವರು ಉಪಾಧ್ಯಕ್ಷರಾಗಿ , ಅರುಂಧತಿ ಆಚಾರ್ ಅವರು ಕಾರ್ಯದರ್ಶಿಯಾಗಿ , ಶೋಭಾ ಪ್ರಸಾದ್ ಜೊತೆ ಕಾರ್ಯದರ್ಶಿಯಾಗಿ, ಶ್ರೀಲತಾ ಶರ್ಮ ಅವರು ಕೋಶಾಧಿಕಾರಿಯಾಗಿ ಆಯ್ಕೆಗೊಂಡರು. ಪ್ರಭಾವತಿ ಈದು, ರತ್ನಾವತಿ ಎನ್ ನಾಯಕ್ , ವಸಂತಿ ಪಿ ಸುವರ್ಣ, ಜಯಂತಿ ಶೆಟ್ಟಿ , ಕಾಂತಿ ಶೆಟ್ಟಿ, ಜ್ಯೋತಿ ಲಕ್ಷ್ಮಿಯವರನ್ನು ಒಕ್ಕೂಟದ ಪದಾಧಿಕಾರಿಗಳಾಗಿ ನೇಮಕ ಮಾಡಲಾಯಿತು. ಒಕ್ಕೂಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ಹಾಗೂ ಶಿಶು ಪಾಲನಾ ಕೇಂದ್ರ ನಡೆಸಲ್ಪಡುತ್ತಿದ್ದು ಕೌಟುಂಬಿಕ ಕಲಹಕ್ಕೆ ಸಂಬಂಧಪಟ್ಟ ದೂರುಗಳನ್ನು ದಾಖಲಿಸಬಹುದಾಗಿದೆ ಹಾಗೂ ಶಿಶುಪಾಲನ ಕೇಂದ್ರದಲ್ಲಿ ಆರು ತಿಂಗಳಿಂದ ಆರು ವರ್ಷದವರೆಗಿನ ಮಕ್ಕಳ 8ಉದ್ಯೋಗಸ್ಥ ಪೋಷಕರು ಮಕ್ಕಳನ್ನು ದಾಖಲು ಮಾಡಬಹುದಾಗಿದೆ ಎಂದು ಅಧ್ಯಕ್ಷರು ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.
ರತ್ನಾವತಿ ನಾಯಕ್ ರವರು ಸ್ವಾಗತಿಸಿದರು ಶ್ರೀಲತಾ ಶರ್ಮ ರವರು ಪ್ರಾರ್ಥನೆ ಗೀತೆ ಹಾಡಿದರು. ಕಾಂತಿ ಶೆಟ್ಟಿ ಅವರು ವಂದಿಸಿದರು ಸಾಂತ್ವನ ಕೇಂದ್ರದ ಸಿಬ್ಬಂದಿಗಳು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು