3:51 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ ಪ್ರತಿಪಕ್ಷದ ನಾಯಕನಾಗಿ ಕಾಂಗ್ರೆಸ್ಸಿನ ಪ್ರವೀಣ್ ಚಂದ್ರ ಆಳ್ವ ಆಯ್ಕೆ

26/09/2023, 19:30

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕನಾಗಿ ಕಾಂಗ್ರೆಸ್ ಪಕ್ಷದ ಪ್ರವೀಣ್ ಚಂದ್ರ ಆಳ್ವ ಆಯ್ಕೆಯಾಗಿದ್ದಾರೆ.


ಪಾಲಿಕೆ ವ್ಯಾಪ್ತಿಯ ಕಂಕನಾಡಿ ಬಿ ವಾರ್ಡ್ ನಿಂದ ಎರಡನೇ ಬಾರಿ ಆಯ್ಕೆಯಾದ ಪ್ರವೀಣ್ ಚಂದ್ರ ಆಳ್ವ ಅವರನ್ನು ಪಕ್ಷದ ಕಾರ್ಪೋರೇಟರ್ ಗಳ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನವೀನ್ ಡಿಸೋಜ ಅವರ ಸ್ಥಾನಕ್ಕೆ ಪ್ರವೀಣ್ ಆಯ್ಕೆಗೊಂಡಿದ್ದಾರೆ. ಪಾಲಿಕೆಯಲ್ಲಿ ಕಳೆದ ಬಾರಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದಾಗ ಅವರು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಗೊಂಡು ಆಡಳಿತದ ಅನುಭವ ಹೊಂದಿದ್ದಾರೆ. ನೇರ ನಡೆ ನುಡಿಗೆ ಖ್ಯಾತರಾದ ಪ್ರವೀಣ್ ಚಂದ್ರ ಆಳ್ವ ಅವರು ಮಂಗಳೂರು ತುಂಬಾ ಚಿರಪರಿಚಿತರು.

ಇತ್ತೀಚಿನ ಸುದ್ದಿ

ಜಾಹೀರಾತು