4:57 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ತೆಲಂಗಾಣ ರಸ್ತೆ ಅಪಘಾತ: ಅಥಣಿ ಕುಟುಂಬದ ಮತ್ತೊಬ್ಬ ಗಾಯಾಳು ಸಾವು; ಮೃತರ ಸಂಖ್ಯೆ 7ಕ್ಕೇರಿಕೆ

26/09/2023, 19:53

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ತೆಲಂಗಾಣದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇನ್ನೊರ್ವ ಗಾಯಾಳು ಸಾವನ್ನಪ್ಪುದರೊಂದಿಗೆ ಮೃತರ ಸಂಖ್ಯೆ 7ಕ್ಕೇರಿದೆ.


ಸೆಪ್ಟಂಬರ್ 15 ರಂದು ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿ ಕಡಪಾ- ಚಿತ್ತೂರು ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಅಥಣಿ ತಾಲೂಕಿನ ಬಡಚಿ ಗ್ರಾಮದ 5 ಮಂದಿ ಸಾವನ್ನಪ್ಪಿದ್ದರು. ತಿರುಪತಿ ಪ್ರವಾಸಕ್ಕೆ ತೆರಳಿದ ಆಜೂರ್ ಕುಟುಂಬದ 14 ಜನರಲ್ಲಿ ನಾಲ್ವರು ಹಾಗೂ ವಾಹನ ಚಾಲಕ ಒಟ್ಟು ಐದು ಜನ ಸ್ಥಳದಲ್ಲೇ ಮೃತ ಪಟ್ಟಿದ್ದರು ಕಸ್ತೂರಿ ಆಜೂರ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಿಂದ – ಬೆಳಗಾವಿಗೆ ತರುವಾಗ ರಸ್ತೆ ಮದ್ಯದಲ್ಲೇ ಕೊನೆವುಸಿರೆಳೆದಿದ್ದರು.. ಇನ್ನುಳಿದ 7 ಜನರಲ್ಲಿ ಇಂದು ನಸುಕಿನ ಜಾವ ಮತ್ತೊರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೆಡಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸವರಾಜ್ ಗಿರಿಮಲ್ಲ ಆಜೂರ್ (32) ಮಹಾರಾಷ್ಟ್ರ ದ ಮಿರಜ್ ಆಸ್ಪತ್ರೆಗೆ ತರುವಾಗ ರಸ್ತೆ ಮದ್ಯ ಸಾವು ಸಂಭವಿಸಿದೆ.
ಬಸವರಾಜ ಸಾವಿನಿಂದ ಆಜೂರ ಕುಟುಂಬದ ಸಾವಿನ ಸಂಖ್ಯೆ 7ಕ್ಕೆ ಏರಿದೆ. ಇನ್ನುಳಿದ ತಿರುಪತಿ ತಿಮ್ಮಪ್ಪನ ಪ್ರವಾಸದಲ್ಲಿ ಕುಟುಂಬ ಕಳೆದುಕೊಂಡ ಆಜೂರ ಮನೆತನದಲ್ಲಿ ನೀರವ ಮೌನ ಅವರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು