9:46 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು ಹೊಸ ಸಿಎಂ? 

27/07/2021, 17:50

ಬೆಂಗಳೂರು(reporterkarnataka news) ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಇಂದು ರಾತ್ರಿ 7:30ಕ್ಕೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಅಲ್ಲಿ ನೂತನ ಮುಖ್ಯಮಂತ್ರಿಯ ಘೋಷಿಸುವ ಸಾಧ್ಯತೆಗಳಿವೆ.

ವೀಕ್ಷಕರಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಲಿದ್ದು, ಎಲ್ಲಾ ಶಾಸಕರ ಅಭಿಪ್ರಾಯ ಪಡೆದ ಬಳಿಕ ನೂತನ ಸಿಎಂ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ಹೈಕಮಾಂಡ್ ಈಗಾಗಲೇ ಮುಖ್ಯಮಂತ್ರಿ ಯಾರಾಗಬೇಕೆನ್ನುವುದನ್ನು ನಿರ್ಧರಿಸಿದ್ದು, ಶಾಸ್ತ್ರಕಷ್ಟೇ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ಶಾಸಕಾಂಗ ಸಭೆ ನಡೆಸಲಾಗುತ್ತದೆ ಎನ್ನಲಾಗಿದೆ. ಬಿಜೆಪಿ ಇರಲಿ, ಕಾಂಗ್ರೆಸ್ ಇರಲಿ ಹೈಕಮಾಂಡ್ ಸಂಸ್ಕೃತಿಯ ಪಕ್ಷಗಳು ಮೊದಲಿನಿಂದಲೂ ಹೇರುವ ಕ್ರಮವನ್ನೇ ಮಾಡಿಕೊಂಡು ಬಂದಿವೆ. ಹಿಂದೆ ಕಾಂಗ್ರೆಸ್ ಆಡಳಿತದಲ್ಲಿದ್ದಾಗಲೂ ದೆಹಲಿಯಿಂದ ಚೀಟಿ ಕಳುಹಿಸುವ ಮೂಲಕ ಮುಖ್ಯಮಂತ್ರಿಯ ಆಯ್ಕೆ ನಡೆಸಿತ್ತು. ವಿಶೇವೆಂದರೆ ಅಂದು ಕಾಂಗ್ರೆಸ್ ನ ಹೈಕಮಾಂಡ್ ಸಂಸ್ಕೃತಿಯನ್ನು ಟೀಕಿಸುತ್ತಿದ್ದ ಬಿಜೆಪಿ ಇದೀಗ ಕಾಂಗ್ರೆಸ್ ನ್ನು ಓವರ್ ಟೇಕ್ ಮಾಡಿದೆ. ಈ ನಡುವೆ ಹೊಸ ಸಿಎಂ ಯಾರೆಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಗ್ರಾಮ ಪಂಚಾಯಿತಿ ಚುನಾವಣೆಯನ್ನು ಎದುರಿಸದ ವ್ಯಕ್ತಿಯಿಂದ ಆರಂಭಗೊಂಡು ಕೇಂದ್ರ ಸಚಿವರ ವರೆಗೆ ಹೆಸರು ಕೇಳಿಬರುತ್ತಿದೆ. ಆದರೆ ಯಾರೆನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಯಾವುದಕ್ಕೂ ಸ್ವಲ್ಪ ಕಾದು ನೋಡೋಣ.

ಇತ್ತೀಚಿನ ಸುದ್ದಿ

ಜಾಹೀರಾತು