3:24 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಯುವ ಸಮುದಾಯ ಸಾಮಾಜಿಕವಾಗಿ ತೊಡಗಿಕೊಳ್ಳುವುದು ಅಗತ್ಯ: ರವಿ ನಾಯಕ್

28/09/2023, 14:56

ಚಿತ್ರ /ವರದಿ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಸಂವಾದ ಯುವ ಸಂಪನ್ಮೂಲ ಕೇಂದ್ರ ಮಂಗಳೂರು, ಯುವ ಮುನ್ನಡೆ ತಂಡ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ “ಯುವಜನ ಹಬ್ಬ- ಕರ್ತವ್ಯ ಪಾಲನೆಗಾಗಿ ಯುವಜನ ಅಭಿವ್ಯಕ್ತಿ” ಎನ್ನುವ ಕಾರ್ಯಕ್ರಮ ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕ ರವಿ ವೈ.ನಾಯಕ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ ಅವರು, ಯುವಜನರು ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಕೊಳ್ಳಬೇಕು. ದೇಶದ ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ನಮ್ಮ ಫಂಡ್ ಮೆಂಟಲ್ ರೈಟ್ಸ್ ಅಗತ್ಯ. ಆ ನಿಟ್ಟಿನಲ್ಲಿ ಸಂವಾದ ಸಂಸ್ಥೆಯ ಈ ಕಾರ್ಯಕ್ರಮದ ಮೂಲ ಆಶಯ ಕಾರ್ಯಕಲ್ಪನೆ ಎಂಬುದು ಶ್ಲಾಘನೀಯ ವಿಷಯ ಎಂದರು.ಯುವಕರು ಓದಿ ವಿದ್ಯಾವಂತರಾಗುವುದು ಅಷ್ಟೇ ಅಲ್ಲದೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದು ನಿಜವಾದ ಜೀವನ. ಸಮಾಜ ಸೇವೆ ಮಾಡುವ ಮನೋಭಾವನೆ ಉಳ್ಳ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾಯೋಜನೆಯಲ್ಲಿ ತೊಡಗಿಸಿ ಕೊಳ್ಳಿ ಎಂದು ಕರೆ ನೀಡಿದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಮಾತನಾಡಿ,
ಸಮಾಜದ ವಾಸ್ತವಗಳ ಅರಿವು ಯುವ ಜನರಿಗೆ ಅಗತ್ಯ, ಮಾನಸಿಕ ವಾಗಿ ಸದೃಢರಾಗಲು ವಿಶ್ಲೇಷಿಸುವ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಅವರು ಹೇಳಿದರು.
ಸಂತ ಅಲೋಶಿಯಸ್ ಕಾಲೇಜಿನ ರೆ.ಫಾ. ಮೆಲ್ವಿನ್ ಜೆ ಪಿಂಟೊ ಉಪಸ್ಥಿತರಿದ್ದರು.

ಯುವಜನರ ಸಂವಿಧಾನ ಬದ್ಧ ಮೂಲಭೂತ ಸೌಕರ್ಯಗಳು, ಯುವಜನರ ಆರೋಗ್ಯ, ಲಿಂಗ ನ್ಯಾಯ ಮತ್ತು ಸುಸ್ಥಿರ ಅಭಿವೃದ್ಧಿ ವಿಚಾರಗಳ ಗೋಷ್ಠಿಯನ್ನು ಯುವಜನರು ನಡೆಸಿಕೊಟ್ಟರು. ಯುವ ಮುನ್ನಡೆಯ ಒಡನಾಡಿಗಳು ಯುವಜನರ ಸಮಸ್ಯೆಗಳ ಕುರಿತು ಮಾಡಿದ ಅಧ್ಯಯನದ ವಿಷಯವನ್ನು ಮಂಡಿಸಿದರು.

ಕಾರ್ಯಕ್ರದ ಅಧ್ಯಕ್ಷತೆಯನ್ನು ಲೇಖಕಿ, ಚಿಂತಕಿ ಗುಲಾಬಿ ಬಿಳಿ ಮಲೆ ವಹಿಸಿದ್ದರು.




ಸಂವಾದ ಸಂಸ್ಥೆಯ ಮಂಜುಳಾ ಸುನೀಲ್ ಸ್ವಾಗತಿಸಿದರು, ಪವಿತ್ರಾ ಜ್ಯೋತಿಗುಡ್ಡೆ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು