8:39 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮೂಡಿಗೆರೆ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು; 10ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

28/09/2023, 23:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರ ಮೇಲೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಹೆಜ್ಜೇನು ದಾಳಿಗೆ ಕಾರ್ಮಿಕರು ಭಯಭಿತರಾಗಿ ದಿಕ್ಕಾಪಾಲಗಿ ಓಡಿದ್ದಾರೆ. 10 ಜನರ ಮೇಲೆ ದಾಳಿ ನಡೆಸಿದೆ. ಇವರಲ್ಲಿ
ವಿನೋದ, ಪುಷ್ಪ ಹಾಗೂ ಪ್ರೇಮಾ ಎಂಬುವವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ತೋಟಗಳಲ್ಲಿ ಜೇನುಗಳು ಗೂಡು ಕಟ್ಟಿಕೊಂಡಿದ್ದು, ರಸ್ತೆಯಲ್ಲಿ ಓಡಾಡುವವರ ಮೇಲೆ ಹಾಗೂ ಕೂಲಿ ಕೆಲಸ ಮಾಡುವವರ ಮೇಲೆ ದಾಳಿ ಮಾಡುತ್ತಿವೆ. ಇದರಿಂದಾಗಿ ಯುವಕರು, ಯುವತಿಯರು ಸೇರಿದಂತೆ ಗ್ರಾಮದ ಹಲವರು ಜೇನು ದಾಳಿಗೆ ತುತ್ತಾಗಿ ಆಸ್ಪತ್ರೆ ಸೇರಿದ ಉದಾಹರಣೆ ಸಾಕಷ್ಟು ನಡೆದಿವೆ. ಜೇನು ಹುಳುಗಳ ಹಠಾತ್ ದಾಳಿಗೆ ಆತಂಕಗೊಂಡಿರುವ ಗ್ರಾಮಸ್ಥರು ದಾಳಿ ನಡೆದ ರಸ್ತೆಯಲ್ಲಿ ಓಡಾಡುವುದಕ್ಕೆ ಭಯಪಡುವಂತಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು